ಕುಂದಾಪುರ: ಬೇಸಿಗೆ ರಜೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ಜನ ಸಾಗರವೆ ಕಂಡು ಬಂದಿದೆ.
ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಯ ದರ್ಶನ ಪಡೆಯಲು ರಾಜ್ಯ ಮತ್ತು ಹೊರ ರಾಜ್ಯಗಳಿಂದ ದಿನಂಪ್ರತಿ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ವಸತಿ ಗೃಹಗಳು ತುಂಬಿ ತುಳುಕುತ್ತಿದ್ದು ದೇಗುಲದ ಹೊರ ಭಾಗದಲ್ಲಿಯೂ ಜನ ಜಂಗುಳಿ ಏರ್ಪಟ್ಟಿದೆ.
ಇತ್ತಿಚ್ಚಿನ ವರ್ಷಗಳಲ್ಲಿ ರಜಾ ದಿನಗಳಲ್ಲಿ ಕುಟುಂಬ ಸಮೇತರಾಗಿ ದೇವಾಲಯಕ್ಕೆ ಭೇಟಿ ನೀಡುವ ರೂಢಿ ಜನರಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದು ರಜಾ ದಿನಗಳಲ್ಲಿ ಪ್ರಸಿದ್ಧ ದೇವಾಲಯಗಳಲ್ಲಿ ಭಕ್ತ ಸಾಗರವೆ ಹರಿದು ಬರುತ್ತಿದೆ.