News Karnataka Kannada
Thursday, April 25 2024
Cricket
ಉಡುಪಿ

ಕುಂದಾಪುರ: ಗುರುರಾಜ್ ಗಂಟಿಹೊಳೆ ಬೃಹತ್ ರೋಡ್ ಶೋ

Gururaj Gantihole's massive roadshow
Photo Credit : News Kannada

ಕುಂದಾಪುರ: ಬೈಂದೂರು ವಿಧಾನಸಭೆ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರು ಶನಿವಾರ ಸಂಜೆ ತಲ್ಲೂರು ನಿಂದ ಶಿರೂರು ತನಕ ತೆರೆದ ವಾಹನದಲ್ಲಿ ಬೃಹತ್ ರೋಡ್ ಶೋ ನಡೆಸಿ ಕಾರ್ಯಕರ್ತರೊಡನೆ ವಿಜಯೋತ್ಸವ ಆಚರಿಸಿದರು‌.

ಗುರುರಾಜ್ ಗಂಟಿಹೊಳೆ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಇದು ಯಾರೋ ಒಬ್ಬರ ಗೆಲುವಲ್ಲ ಸಂಪೂರ್ಣ ಕಾರ್ಯಕರ್ತರ ಗೆಲುವು,ನಾವು ಕಾಣದೆ ಇರುವ ಎಷ್ಟೋ ಕಾರ್ಯಕರ್ತರು ಈ ಗೆಲುವಿಗಾಗಿ ಶ್ರಮಿಸಿದ್ದಾರೆ ಇದು ನನ್ನ ಗೆಲುವೆಲ್ಲ ನಮ್ಮೆಲ್ಲರ ಗೆಲುವು ಇದೇ ಭಾವ ಎಲ್ಲರಲ್ಲೂ ಇರಲಿ ಮುಂದಿನ ಐದು ವರ್ಷ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ತಮ್ಮ ಅದ್ಭುತ ಪೂರ್ವ ಗೆಲುವಿಗೆ ಕಾರಣೀಭೂತರಾದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು.

ರೋಡ್ ಶೋ ಕೊನೆಯಲ್ಲಿ ಇತಿಹಾಸ ಪ್ರಸಿದ್ಧ ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ದೀಪಕುಮಾರ್ ಶೆಟ್ಟಿ ಸುರೇಶ್ ಶೆಟ್ಟಿ ಉಪ್ಪುಂದ , ಜಿಲ್ಲಾ ಉಪಾಧ್ಯಕ್ಷ ಸದಾನಂದ ಉಪ್ಪಿನಕುದ್ರು,ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಮಹೇಂದ್ರ ಪೂಜಾರಿ, ಕರುಣ್ ಪೂಜಾರಿ,ಶ್ರೀಧರ್ ಬಿಜಾರು ಶರತ್ ಶೆಟ್ಟಿ ಉಪ್ಪುಂದ ಆಕಾಶ್ ಪೂಜಾರಿ, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು