News Karnataka Kannada
Friday, April 26 2024
ಉಡುಪಿ

ಕುಂದಾಪುರ: ಹಾಲಾಡಿ-ಕೊಡ್ಗಿ ಜೋಡಿಗೆ ಗೆಲುವಿನ ಸಂಭ್ರಮ

Kundapur: Haladi-Kodgi duo celebrates their victory
Photo Credit : News Kannada

ಕುಂದಾಪುರ: ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಡುವಿನ ಜಿದ್ದಾಜಿದ್ದಿನ ಕಣವಾದ ಕುಂದಾಪುರ ವಿಧಾನಸಭೆ ಕ್ಷೇತ್ರದಲ್ಲಿ ಹಾಲಾಡಿ-ಕೊಡ್ಗಿ ಜೋಡಿಗೆ ಗೆಲುವಿನ ಸಂಭ್ರಮ ದೊರೆತ್ತಿದೆ.

ಬಿಜೆಪಿ ಪಕ್ಷದ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ದಿನೇಶ್ ಹೆಗ್ಡೆ ಮೊಳಹಳ್ಳಿ ವಿರುದ್ಧ 40930 ಮತಗಳ ಅಂತರದಿಂದ ಪ್ರಚಂಡವಾದ ಜಯವನ್ನು ಗಳಿಸಿದ್ದಾರೆ.

ಕುಂದಾಪುರ ಕ್ಷೇತ್ರದಲ್ಲಿ ಸತತ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡದೆ ಇದ್ದಿದ್ದರಿಂದ ಕಿರಣ್ ಕುಮಾರ್ ಕೊಡ್ಗಿ ಅವರು ಕುಂದಾಪುರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದರು. ತಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡದೆ ಇದ್ದಿದ್ದರೂ ಅಭ್ಯರ್ಥಿ ಪರವಾಗಿ ಕೆಲಸ ಮಾಡಿ ಅವರ ಗೆಲುವಿಗೆ ಶ್ರಮಿಸಲಾಗುವುದು ಎನ್ನುವ ಮಾತನ್ನು ಚುನಾವಣೆ ಸಂದರ್ಭದಲ್ಲಿ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಹೇಳಿದ್ದರು.

ನುಡಿದಂತೆ ನಡೆದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ಕಿರಣ್ ಕುಮಾರ್ ಕೊಡ್ಗಿ ಪರವಾಗಿ ಪ್ರಚಾರವನ್ನು ಮಾಡಿದ್ದು ಮಾತ್ರವಲ್ಲದೆ 40,000 ಕ್ಕೂ ಅಧಿಕ ಮತಗಳಿಂದ ಗೆಲ್ಲಿಸಿ ಆಡಿದ ಮಾತನ್ನು ಉಳಿಸಿಕೊಂಡಿದ್ದಾರೆ. ಬಿಜೆಪಿ ಪಕ್ಷದ ಘಟಾನುಘಟಿ ನಾಯಕರುಗಳು ಸೋಲನ್ನು ಕಂಡಿದ್ದರೂ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರು ತನ್ನ ಸ್ವತಃ ವರ್ಚಸ್ಸಿನಿಂದ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು