ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೀಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳಅಳಿವೆ ಕಡಲ ಕಿನಾರೆ ಪರಿಸರದಲ್ಲಿ ಮೀನುಗಾರಿಕೆಗೆ ತೆರಳಿದ ವ್ಯಕ್ತಿ ದೋಣಿಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.
ಕುಂದಾಪುರ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತ ಮೀನುಗಾರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.