ಕುಂದಾಪುರ:ಬೈಂದೂರು ವಿಧಾನಸಭೆ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಪರವಾಗಿ ಬಿಜೆಪಿ ಯುವ ನಾಯಕ ಹಾಗೂ ಉಡುಪಿ ಕ್ಷೇತ್ರದ ಅಭ್ಯರ್ಥಿ ಯಶ್ಪಾಲ್ ಎ. ಸುವರ್ಣ ಹಾಗೂ ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರು ಉಪ್ಪುಂದದ ಅಳುವೆಕೋಡಿಯಿಂದ ಕರ್ಕಿಕಾಳಿಯವರೆಗೂ ಶನಿವಾರ ಸಂಜೆ ಭರ್ಜರಿ ರೋಡ್ ಶೋ ನಡೆಸಿ,ಮತ ಯಾಚಿಸಿದರು.
ಉಡುಪಿ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಯಶ್ಪಾಲ್ ಸುವರ್ಣ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಗುರುರಾಜ್ ಗಂಟಿಹೊಳೆಯವರು ಆರೆಸ್ಸೆಸ್ನ ಪ್ರಚಾರಕರಾಗಿ, ಪಕ್ಷದ ನಿಷ್ಟಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಸಾಮಾನ್ಯ ಕಾರ್ಯಕರ್ತನನ್ನು ಪಕ್ಷ ಗುರುತಿಸಿ ಅವಕಾಶ ನೀಡಿದೆ.ಕಾರ್ಯಕರ್ತರಾದ ನಾವೆಲ್ಲರು ಇನ್ನುಳಿದ ಎರಡುಮೂರು ದಿನದಲ್ಲಿ ಹೆಚ್ಚು ಶ್ರಮವಹಿಸಿ ಮನೆ ಮನೆ ಭೇಟಿ, ಪ್ರಚಾರ ಮಾಡುವ ಮೂಲಕ ಅವರನ್ನು ಪೂರ್ಣ ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಕರೆ ನೀಡಿದರು.ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಮೀನುಗಾರರ ಬಹುಪಾಲು ಸಮಸ್ಯೆ ಪರಿಹಾರ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉಡುಪಿ ಕ್ಷೇತ್ರದ ಹಾಲಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ ಗುರುರಾಜ ಗಂಟಿಹೊಳೆಯವರೊಂದಿಗೆ ಯುವ ಸಮೂಹವೇ ಇದೆ. ಅವರ ಗೆಲುವಿಗೆ ಎಲ್ಲರೂ ಒಟ್ಟಾಗಿ ಶ್ರಮೀಸಬೇಕು. ಮೀನುಗಾರರ ಸೀಮೆಎಣ್ಣೆ ಸಮಸ್ಯೆಗೆ ಕೇಂದ್ರ ಸರಕಾರ ಶಾಶ್ವತ ಪರಿಹಾರ ನೀಡಲಿದೆ. ಇದಕ್ಕಾಗಿ ರಾಜ್ಯದಲ್ಲೂ ಅಧಿಕಾರಕ್ಕೆ ಬರಬೇಕು. ಬೈಂದೂರಿನಲ್ಲೂ ಗುರುಅಣ್ಣ ಜಯ ಸಾಧಿಸಬೇಕು ಎಂದರು.
ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ,ಬಿಗ್ ಬಾಸ್ ವಿನ್ನರ್ ಶೈನ್ ಶೆಟ್ಟಿ,ಬಿಜೆಪಿ ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಗೋವಿಂದ ಬಾಬು ಪೂಜಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ ಉಪ್ಪುಂದ, ಪಕ್ಷದ ಮುಖಂಡರು ಉಪಸ್ಥಿತರಿದ್ದರು,ಸಾವಿರಾರು ಕಾರ್ಯಕರ್ತರು ರೋಡ್ ಶೋ ನಲ್ಲಿ ಭಾಗವಹಿಸಿದ್ದರು.