ಕುಂದಾಪುರ: ಕೇಂದ್ರ ದೂರಸಂಪರ್ಕ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಶಿವಮೊಗ್ಗ ಟೆಲಿಕಾಂ ಜಿಲ್ಲೆಗೆ 4ಜಿ ಸ್ಯಾಚುರೇಷನ್ ಯೋಜನೆಯಡಿಯಲ್ಲಿ 198 ಹಾಗೂ ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ 27 ಹೊಸ 4ಜಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮಂಜೂರಾತಿಯನ್ನು ನೀಡಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿ ಪ್ರದೇಶದಲ್ಲಿ ಒಟ್ಟು 225 ಹೊಸ ಮೊಬೈಲ್ ನೇಟ್ವರ್ಕ್ ಟವರ್ ಗಳು ನಿರ್ಮಾಣವಾಗುವುದರಿಂದ ಮೊಬೈಲ್ ನೇಟ್ವರ್ಕ್ ಸಮಸ್ಯೆಯಿಂದ ಬಳಲುತ್ತಿದ್ದ ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ.
ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರಕ್ಕೆ ಸಂಸದರು ಧನ್ಯವಾದ ಅರ್ಪಿಸಿದರು.
ಮೊಬೈಲ್ ನೇಟ್ವರ್ಕ್ ಸಮಸ್ಯೆಯಿಂದ ಗ್ರಾಮೀಣ ಭಾಗದ ಜನರು ಬಹಳಷ್ಟು ತೊಂದರೆಯನ್ನು ಅನುಭವಿಸಿದ್ದರು.ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ರಾಮಾಂತರ ಪ್ರದೇಶದ ಜನರು ಚುನಾವಣೆ ಬಹಿಷ್ಕಾರದಂತಹ ನಿರ್ಧಾರವನ್ನು ತಾಳಿದ್ದರು.ಜನರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಸಂಸದ ಬಿ.ವೈ.ರಾಘವೇಂದ್ರ ಅವರು ಮೊಬೈಲ್ ನೇಟ್ ವರ್ಕ್ ಟವರ್ ಒದಗಿಸಿಕೊಡುವಂತೆ ಕೇಂದ್ರ ದೂರ ಸಂಪರ್ಕ ಇಲಾಖೆಗೆ ಮನವಿಯನ್ನು ಸಲ್ಲಿಸಿದ್ದರು.