ಕುಂದಾಪುರ: ಬೈಂದೂರು ವಿಧಾನಸಭೆ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಗುರುರಾಜ ಗಂಟೆಹೊಳೆ ಅವರಿಗೆ ಬೈಂದೂರು ಮಂಡಲ ಬಿಜೆಪಿ ವತಿಯಿಂದ ವಂಡ್ಸೆಯಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಪಕ್ಷದ ಸಾಮಾನ್ಯ ಕಾರ್ಯಕರ್ತ ಗುರುರಾಜ ಗಂಟಿಹೊಳೆಯವರು ಸಂಘಟನೆಯಿಂದ ಬೆಳೆದು ಬಂದ ನಿಷ್ಠಾವಂತ ಕಾರ್ಯಕರ್ತ. ಅವರಿಗೆ ಕ್ಷೇತ್ರದ ಅಭಿವೃದ್ಧಿಯ ಪೂರ್ಣ ಪರಿಕಲ್ಪನೆ ಇದೆ. ಕಾರ್ಯಕರ್ತರನ್ನು ಜೊತೆಗೆ ಕರೆದುಕೊಂಡು ಹೋಗಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿರಬಹುದು. ಆದರೆ ಮುಂದೆ ಖಂಡಿತ ಅಧಿಕಾರಕ್ಕೆ ಬರಲಿದೆ. ಬೈಂದೂರು ಕ್ಷೇತ್ರವನ್ನು ಗುರುರಾಜಗಂಟಿಹೊಳೆ ಅವರ ಮುಂದಾಳತ್ವದಲ್ಲಿ ಮಾದರಿ ಕ್ಷೇತ್ರವಾಗಿ ರೂಪುಗೊಳ್ಳಲಿದೆ. ವಿಶ್ವನಾಯಕರಾದ ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನ ನಮಗೆಲ್ಲರಿಗೂ ಸದಾ ಇರುತ್ತದೆ ಎಂದರು.
ಬೈಂದೂರು ಕ್ಷೇತ್ರದ ನೂತನ ಶಾಸಕ ಗುರುರಾಜ ಗಂಟಿ ಹೊಳೆ ಅವರು ಮಾತನಾಡಿ ಇದು ಸಾಮಾನ್ಯ ಕಾರ್ಯಕರ್ತನೊಬ್ಬನ ಗೆಲುವು. ಬೂತ್ ಮಟ್ಟದಲ್ಲೂ ಕಾರ್ಯಕರ್ತರು ತಮ್ಮದೇ ನೆಲೆಯಲ್ಲಿ ಅತಿ ಉತ್ಸಾಹದಿಂದ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇಡೀ ಕ್ಷೇತ್ರದಾದ್ಯಂತ ಜನತೆ ತುಂಬ ಮನಸ್ಸಿನಿಂದ ನಮ್ಮನ್ನು ಸ್ವೀಕರಿಸಿ ಆಯ್ಕೆ ಮಾಡಿದ್ದಾರೆ. ಅವರ ನಿರೀಕ್ಷೆಯಂತೆ ಸೇವೆ ಸಲ್ಲಿಸಲಿದ್ದೇನೆ ಎಂದು ಕಾರ್ಯಕರ್ತರ ಸೇವೆಯನ್ನು ಸ್ಮರಿಸಿದರು.
ಈ ಸಂದರ್ಭದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ, ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಸನ್ಮಾನಿಸಲಾಯಿತು.
ಚುನಾವಣಾ ಉಸ್ತುವಾರಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು,ಜಿಲ್ಲಾ ಕಾರ್ಯದರ್ಶಿ ಮಾಲತಿ ಬಿ ನಾಯಕ್, ವಂಡ್ರೆ ಶಕ್ತಿ ಕೇಂದ್ರದ ಅಧ್ಯಕ್ಷ ನಾಗರಾಜ ಶೆಟ್ಟಿ ನಾರ್ಕಳಿ, ಮಂಡಲ ಪ್ರಭಾರಿ ಕಿಶೋರ್ ಕುಂದಾಪುರ, ಮಾಜಿ ಜಿ.ಪ. ಸದಸ್ಯ ಸುರೇಶ್ ಬಟವಾಡಿ, ರೋಹಿತ್ ಶೆಟ್ಟಿ, ಶೋಭಾ ಪುತ್ರನ್, ತಾ.ಪಂ. ಮಾಜೀ ಅಧ್ಯಕ್ಷ ಮಹೇಂದ್ರ ಪೂಜಾರಿ, ಇಂದಿರಾ ಶೆಟ್ಟಿ, ಶ್ಯಾಮಲಾ ಕುಂದರ್ ಮಾಲಿನಿ ಕೆ ಮತ್ತಿತರರು ಉಪಸ್ಥಿತರಿದ್ದರು.
ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು,ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿ ದೇವಾಡಿಗ ನಿರೂಪಿಸಿದರು.ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ ವಂದಿಸಿದರು.