ಉಡುಪಿ: ನೂತನ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಮತ್ತು ಡಿ.ಕೆ ಶಿವಕುಮಾರ್ ಅವರಿಗೆ ಅಭಿಮಾನಿಗಳು ಶುಭಾಶಯ ಕೋರಿ ಮಲ್ಪೆ ಪಡುಕೆರೆ ಸೇತುವೆ ಬಳಿಯಲ್ಲಿ ಅಳವಡಿಸಿರುವ ಫ್ಲೆಕ್ಸನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿದ್ದಾರೆ.
ಪಡುಕೆರೆಗೆ ಶಾಲೆ, ರಸ್ತೆ, ನಲ್ಲಿ ನೀರು, ವಿದ್ಯುತ್, ಸಮುದ್ರಕ್ಕೆ ತಡೆಗೋಡೆ, ಮಲ್ಪೆ ಬಂದರು, ಸಬ್ಸಿಡಿ, ಸೇತುವೆ, ಜನರ ಹೊಟ್ಟೆ ತುಂಬಿಸಲು ಪಡಿತರ ಕೇಂದ್ರ ಇಂತಹ ಹಲವಾರು ಅಭಿವೃದ್ಧಿ ಯೋಜನೆಗಳನ್ನು ನೀಡಿದ್ದು ಕಾಂಗ್ರೆಸ್ ಸರಕಾರವೇ ಹೊರತು ಮತ್ಯಾವುದೇ ಪಕ್ಷವಲ್ಲ. ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಯ ಪ್ರಯೋಜನ ಪಡೆಯಲು ಹಾನಿಕಾರಕ ಮನಸ್ಥಿಯುಳ್ಳವರು ಮೊದಲ ಸಾಲಿನಲ್ಲಿರುತ್ತಾರೆ. ಫ್ಲೆಕ್ಸ್ ಹರಿಯುವ, ಮತ್ತೊಬ್ಬನನ್ನು ತುಳಿಯುವ, ವ್ಯಕ್ತಿ – ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿರ್ಭಂಧಿಸುವ ಸರ್ವಾಧಿಕಾರದ ಈ ಭಯೋತ್ಪಾದನೆ ನಿಲ್ಲಬೇಕಾದ ಅನಿವಾರ್ಯತೆ ಇದೆ ಎಂದು ನೂತನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯ ಪಡುಕೆರೆಯ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.