ಉಡುಪಿ: ಜಿಲ್ಲೆಯಲ್ಲಿ ಏಪ್ರಿಲ್, ಮೇ ಮತ್ತು ಜೂನ್ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಇದರಿಂದಾಗಿ ಉಡುಪಿ ನಗರ ಮತ್ತು ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ಉಡುಪಿ ನಗರಕ್ಕೆ ನೀರು ಪೂರೈಸುವ ಬಜೆ ಡ್ಯಾಮ್ ನಿಂದ ಪಂಪಿಂಗ್ ಮೂಲಕ ನಗರ ಪ್ರದೇಶಕ್ಕೆ ನೀರು ಸರಬರಾಜು ಮಾಡುತ್ತಿದ್ದೇವೆ. ಇಷ್ಟಾಗಿಯೂ ಕೂಡ ನೀರಿನ ಸಮಸ್ಯೆ ತಲೆದೋರಿದ್ದಲ್ಲಿ ನಮ್ಮ ಸಹಾಯವಾಣಿ ಸಂಖ್ಯೆ 1077 ಸಂಪರ್ಕಿಸುವಂತೆ ಮನವಿ ಮಾಡಿದರು.
ಜಿಲ್ಲಾಡಳಿತದ ಆದ್ಯತೆಗೆ ಅನುಗುಣವಾಗಿ ಜಲಮೂಲಗಳ ಹೂಳೆತ್ತುವುದು, ಸ್ವಚ್ಛತೆ ಮತ್ತಿತರ ಕಾರ್ಯಗಳನ್ನು ಮಾಡಿದೆ. ಆದರೂ ಕೂಡ ಗ್ರಾಮೀಣ ಭಾಗದ ಕೆಲವೆಡೆ ಮತ್ತು ನಗರ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ತಲೆದೋರಿದೆ. ಈ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು.