News Kannada
Tuesday, May 30 2023
ಉಡುಪಿ

ಉಡುಪಿ: ತಾಕತ್ತಿದ್ದರೆ ಬಜರಂಗದಳ ನಿಷೇಧಿಸಿ – ಯಶ್ ಪಾಲ್ ಸುವರ್ಣ ಆಕ್ರೋಶ

Ban Bajrang Dal if you have the strength: Yashpal Suvarna
Photo Credit : News Kannada

ಉಡುಪಿ: ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ತಾಕತ್ತಿದ್ದರೆ ಬಜರಂಗದಳವನ್ನು ನಿಷೇಧಿಸಿ ಎಂದು ಉಡುಪಿ ಜಿಲ್ಲಾ ಬಜರಂಗದಳದ ಮಾಜಿ ಸಂಚಾಲಕ, ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದುತ್ವದ ವಿಚಾರಧಾರೆಯೊಂದಿಗೆ ರಾಷ್ಟ್ರ ವಿರೋಧಿಗಳಿಗೆ ಸಿಂಹ ಸ್ವಪ್ನ ಸಂಘಟನೆಯಾಗಿ, ಗೋ ಕಳ್ಳರ ಹಾಗೂ ಲವ್ ಜಿಹಾದಿಗಳ ವಿರುಧ್ದ ಕಠಿಣ ನಿಲುವು ತಾಳಿದ ದೇಶ ಭಕ್ತ ಹಿಂದೂ ಸಂಘಟನೆಯನ್ನು ದಮನಿಸುವ ಯತ್ನದ ಮೂಲಕ ರಾಜ್ಯ ಕಾಂಗ್ರೆಸ್ ಪಕ್ಷ ಅಲ್ಪ ಸಂಖ್ಯಾತರ ಓಲೈಕೆಗೆ ಮುಂದಾಗಿದೆ.

ಈ ಹಿಂದೆ ಸದಾ ಹಿಂದೂ ವಿರೋಧಿ ನಿಲುವಿನ ಸರಕಾರ ನಡೆಸಿದ ಸಿದ್ದರಾಮಯ್ಯ ಈಗಾಗಲೇ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಮತಾಂತರ ನಿಷೇಧ ಕಾಯ್ದೆಯನ್ನು ಹ್ತಿರದಿಂದ ಹಿಂಪಡೆಯುವ ಬಗ್ಗೆ ಹಾಗೂ ಟಿಪ್ಪು ಜಯಂತಿ ಆಚರಣೆಗೆ ಮುಂದಾಗುವ ಮೂಲಕ ಹಿಂದೂ ಸಂಘಟನೆಯ ಕಾರ್ಯಕರ್ತರ ತಾಳ್ಮೆ ಪರೀಕ್ಷೆಗೆ ಮುಂದಾಗಿದ್ದಾರೆ.

ಕೇಸರಿ ಶಾಲು ಧರಿಸಿ ಮನೆ ಮನೆ ಭೇಟಿ ನೀಡಿ ನಕಲಿ ಹಿಂದುತ್ವದ ಮುಖವಾಡ ಧರಿಸಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಬಜರಂಗದಳ ನಿಷೇಧದ ಬಗ್ಗೆ ತಮ್ಮ ನಿಲುವು ಸ್ಪಷ್ಟ ಪಡಿಸಲಿ. ಕಾಂಗ್ರೆಸ್ ಪಕ್ಷದ ಈ ಹಿಂದೂ ವಿರೋಧಿ ಮನಸ್ಥಿತಿಗೆ ಸಮಸ್ತ ಹಿಂದೂ ಸಮಾಜ ತಕ್ಕ ಉತ್ತರ ಮುಂದಿನ ಚುನಾವಣೆಯಲ್ಲಿ ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

See also  ಉಡುಪಿಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು