ಉಡುಪಿ: ಬಜರಂಗದಳವನ್ನು ನಿಷೇಧಿಸುವ ಯಾವುದೇ ಪ್ರಸ್ತಾವ ಕಾಂಗ್ರೆಸ್ ಮುಂದೆ ಇಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯಿಲಿ ಸ್ಪಷ್ಟಪಡಿಸಿದ್ದಾರೆ.
ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಕೇಂದ್ರದಲ್ಲಿ ನಾವು ಅಧಿಕಾರದಲ್ಲಿದ್ದಾಗಲೂ ಬಜರಂಗದಳ ನಿಷೇಧ ಮಾಡುವ ಪ್ರಸ್ತಾವ ಇರಲಿಲ್ಲ. ರಾಜ್ಯ ಸರ್ಕಾರ ಅಂತಹ ಸಂಘಟನೆಗಳನ್ನು ನಿಷೇಧಿಸುವ ಹಕ್ಕು ಹೊಂದಿಲ್ಲ ಎಂದರು.
ವಲ್ಲಭಬಾಯಿ ಪಟೇಲ್ ಅವರನ್ನು ಈಗ ಬಿಜೆಪಿ ಆರಾಧಿಸುತ್ತದೆ. ಆದರೆ ಪಟೇಲ್ ಅವರು ಆರೆಸ್ಸೆಸ್ ನ್ನು ಬ್ಯಾನ್ ಮಾಡಿದ್ದರು. ಬಳಿಕ ಜವಾಹರಲಾಲ್ ನೆಹರೂ ನಿಷೇಧವನ್ನು ಹಿಂಪಡೆದಿದ್ದರು. ಬಜರಂಗದಳದಂತಹ ಸಂಘಟನೆಯನ್ನು ನಿಷೇಧಿಸುವ ಪ್ರಸ್ತಾಪ ನಮ್ಮ ಮುಂದಿಲ್ಲ. ಇದನ್ನು ನಮ್ಮ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ಇವತ್ತು ಸ್ಪಷ್ಟಪಡಿಸುತ್ತಾರೆ ಎಂದು ಹೇಳಿದರು.