ಉಡುಪಿ: ಸಿಟಿ ಬಸ್ ಸ್ಟಾಂಡ್ ಬಳಿಯ ರಾಜ್ ಟವರ್ಸ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರಿ ಸಂಘವು ನಗರದ ಪಿಪಿಸಿ ಕ್ರಾಸ್ ರಸ್ತೆಯ ಆಶಾಚಂದ್ರ ಟ್ರೇಡ್ ಸೆಂಟರ್ ಗೆ ಸ್ಥಳಾಂತರಗೊಂಡಿದ್ದು, ನೂತನ ಕಚೇರಿಯ ಉದ್ಘಾಟನೆ ನಡೆಯಿತು.
ಮುಖ್ಯ ಅತಿಥಿಯಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಜಿಲ್ಲಾ ಹೋಟೆಲ್ ಉದ್ಯಮದಾರರ ಸಹಕಾರಿ ಸಂಘದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಉಪಾಧ್ಯಕ್ಷ ನಾಗೇಶ್ ಭಟ್, ಆಡಳಿತ ಮಂಡಳಿಯ ನಿರ್ದೇಶಕರಾದ ಹರೀಶ್ ಹೆಗ್ಡೆ, ಎಂ. ವಿಠಲ ಪೈ, ಲಕ್ಷ್ಮಣ್ ಜಿ. ನಾಯಕ್, ಎಂ. ಕೃಷ್ಣ ಆಳ್ವ, ಸುನಿಲ್ ಶೆಟ್ಟಿ ಮೊದಲಾದವರು ಇದ್ದರು.