News Karnataka Kannada
Friday, April 19 2024
Cricket
ಉಡುಪಿ

ಉಡುಪಿ: ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ ನಿಧನ

Former MLA and Congress leader U.R. Speaker passes away
Photo Credit : News Kannada

ಉಡುಪಿ:  ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನ ಹೊಂದಿದರು. ಅವರು‌ ಕಳೆದು ಒಂದೂವರೆ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

1989ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಡುಪಿ ಕ್ಷೇತ್ರದಿಂದ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಮನೋರಮಾ ಮಧ್ವರಾಜ್ ವಿರುದ್ಧ ಸ್ಪರ್ಧಿಸಿ ಅಲ್ಪ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. 1994ರಲ್ಲಿ ಎಸ್.ಬಂಗಾರಪ್ಪ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಉಡುಪಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು.

1999ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾದರು. 2004ರ ಚುನಾವಣೆಯಲ್ಲಿ ಅವರು ರಘುಪತಿ ಭಟ್ ವಿರುದ್ಧ ಸೋಲು ಕಂಡಿದ್ದರು. ಇವರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು