News Karnataka Kannada
Friday, March 29 2024
Cricket
ಉಡುಪಿ

ಉಡುಪಿ: ಮನೆ ಬಿಟ್ಟು ನಲವತ್ತು ವರ್ಷಗಳ ಬಳಿಕ ಮನೆಯವರಿಗೆ ಶವವಾಗಿ ಸಿಕ್ಕ ವ್ಯಕ್ತಿ

Forty years after leaving home, man found dead by his family
Photo Credit : News Kannada

ಉಡುಪಿ: ಕಳೆದ ನಲವತ್ತು ವರ್ಷಗಳ ಹಿಂದೆ ಮನೆ ಬಿಟ್ಟು ಬಂದಿದ್ದ ವ್ಯಕ್ತಿಯನ್ನು ಕೊನೆಗೂ ಮನೆಯವರು ಜೀವಂತವಾಗಿ ನೋಡಲು ಸಾಧ್ಯವಾಗಿಲ್ಲ. ಶವವಾಗಿ ಸಿಕ್ಕಿದ್ದು ಮಾತ್ರ ದುರಂತವೇ ಸರಿ.

ಮೃತ ವ್ಯಕ್ತಿಯನ್ನು ಕೋಟತಟ್ಟು ಪಡುಕೆರೆಯ ನಿವಾಸಿ ನಾರಾಯಣ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಮನೆಬಿಟ್ಟು ಬರೋಬ್ಬರಿ ನಲ್ವತ್ತು ವರ್ಷಗಳಾಗಿತ್ತು. ಅಂದಿನಿಂದ ಸಾಯುವ ಕೊನೆ ಕ್ಷಣದವರೆಗೂ ಮನೆಯವರ ಮುಖ ನೋಡಲು ಆಗದಿರುವುದು ಮಾತ್ರ ದುರ್ವಿಧಿಯೇ ಸರಿ. ಇವರು ಉಡುಪಿ ಪರಿಸರದಲ್ಲಿ ಕೂಲಿ ಕಾರ್ಮಿಕನಾಗಿ ಜೀವನ ಸಾಗಿಸುತ್ತಿದ್ದು, ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯ ಅಂತ್ಯಸಂಸ್ಕಾರ ನಡೆಸಲು ಅಸಹಾಯಕತೆ ಎದುರಾದಾಗ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಇಂದ್ರಾಳಿಯ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಸಿಕೊಡುವ ಮೂಲಕ ಮಾನವೀಯತೆ ಮೆರೆದರು. ಉಡುಪಿ ನಗರ ಠಾಣೆಯ ಪೊಲೀಸರು ಕಾನೂನು ಪ್ರಕ್ರಿಯೆ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು