News Karnataka Kannada
Saturday, April 20 2024
Cricket
ಉಡುಪಿ

ಉಡುಪಿ: ಮೂಡುಬೆಟ್ಟು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮಾತಾಯಾಚನೆ

Bengaluru: BJP announces list of 189 candidates
Photo Credit : News Kannada

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಕಟಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಮೂಡುಬೆಟ್ಟು ಗ್ರಾಮದ ಸರ್ಕಾರಿ ಗುಡ್ಡೆ ಪ್ರದೇಶದಲ್ಲಿ ಮಾತಾಯಾಚನೆ ಮಾಡಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಲಾಲಾಜಿ ಮೆಂಡನ್ ರವರು ಸರ್ಕಾರಿ ಗುಡ್ಡೆ ಪ್ರದೇಶದ ಜನರ ಬೆಂಬಲ ತುಂಬಾ ಅಗತ್ಯ ಇನ್ನಷ್ಟು ಈ ಪ್ರದೇಶದ ಅಭಿವೃದ್ಧಿ ಕಾರ್ಯಗಳಿಗೆ ಗುರ್ಮೆ ಸುರೇಶ್ ಶೆಟ್ಟಿ ಯವರಿಗೆ ಹೆಚ್ಚಿನ ಬೆಂಬಲ ನೀಡಿ ಅವರ ಗೆಲುವಲ್ಲಿ ನೀವು ಪಾಲುದಾರರಾಗಬೇಕು ಎಂದು ಮನವಿ ಮಾಡಿದರು.

ನಂತರ ಮಾತನಾಡಿದ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾದ ಸುಲೋಚನಾ ಭಟ್ ರವರು, ಸರ್ಕಾರಿ ಗುಡ್ಡೆ ಪ್ರದೇಶದಲ್ಲಿ ನೇರೆದಿರುವ ಜನರ ಸಂಖ್ಯೆಗೆ ಹಾಗೂ ಜನರು ನೀಡಿರುವ ಬೆಂಬಲಕ್ಕೆ ಶ್ಲಾಘನೆ ವ್ಯಕ್ತ ಪಡಿಸಿದರು.

ನಂತರ ಮಾತನಾಡಿದ ಗುರ್ಮೆ ಸುರೇಶ್ ಶೆಟ್ಟಿ ಯವರು, ಶ್ರೀ ನರೇಂದ್ರ ಮೋದಿಯವರ ಸಂಕಲ್ಪ ಗೆಲ್ಲಬೇಕು ನಮ್ಮ ಧರ್ಮ ಗೆಲ್ಲಬೇಕು ಅವರು ಈ ದೇಶಕ್ಕೆ ನೀಡಿರುವ ಕೊಡುಗೆಗಳು ಅಪಾರ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಆಗಲಿವೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಗೀತಾಂಜಲಿ ಸುವರ್ಣ, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರು ವೀಣಾ ಶೆಟ್ಟಿ, ಶಕ್ತಿ ಕೇಂದ್ರ ಪ್ರಮುಖ್ ಸಂತೋಷ್ ಮೂಡುಬೆಳ್ಳೆ ಶಕ್ತಿಕೇಂದ್ರ ಅಧ್ಯಕ್ಷರು ನಿತೇಶ್ ಶೇರಿಗಾರ್, ಅಭ್ಯರ್ಥಿ ಪ್ರಮುಖ್ ಅನಿಲ್ ಕುಮಾರ್, ಕಟಪಾಡಿ ಗ್ರಾಮದ ಬಿಜೆಪಿ ಸದಸ್ಯೆ ಶಾಲಿನಿಚಂದ್ರ ಪೂಜಾರಿ, ಸರ್ಕಾರಿ ಗುಡ್ಡೆ ಭೂತ್ ಅಧ್ಯಕ್ಷರು ನಿತೇಶ್ ದೇವಾಡಿಗ, ಸರ್ಕಾರಿ ಗುಡ್ಡೆ ಓ ಬಿ ಸಿ ಕಾರ್ಯದರ್ಶಿ ರಘುಪತಿ ಆಚಾರ್ಯ, ಪಂಚಾಯತ್ ಸದಸ್ಯೆ ಕುಮಾರಿ ದೀಕ್ಷಿತಾ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು