News Karnataka Kannada
Tuesday, April 23 2024
Cricket
ಉಡುಪಿ

ಉಡುಪಿ: ಪೊಲೀಸರ ಹೆಸರಿನಲ್ಲಿ ಹಣ ವಸೂಲು ಮಾಡಿದವರು ಸೆರೆ

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಕ್ಷಾಂತರ ರೂ ಮೌಲ್ಯದ ಎರಡು ಲಾರಿ ಹಾಗೂ ಸಾವಿರಾರು ರೂಪಾಯಿ ಮೌಲ್ಯದ ಮರಳನ್ನು ಹಾಗೂ ನಾಲ್ಕು ಮಂದಿ ಆರೋಪಿಗಳನ್ನು ಬಂಟ್ವಾಳ ‌ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ಪೋಲೀಸ್ ತಂಡ ವಶಕ್ಕೆ ಪಡೆದುಕೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
Photo Credit : Pixabay

ಉಡುಪಿ: ಪೊಲೀಸರ ಹೆಸರಿನಲ್ಲಿ ಹಣ ವಸೂಲು ಮಾಡುತ್ತಿದ್ದ ಆರೋಪಿಗಳನ್ನು ಮಣಿಪಾಲ ಠಾಣೆಯ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಶಿರ್ವ ಮೂಲದ ಮಂಜುನಾಥ ಅವರು ಮಣಿಪಾಲದ ಅರ್ಬಿಫಾಲ್ಸ್‌ ಬಳಿ ಸ್ನೇಹಿತರೊಂದಿಗೆ ಮೇ 26ರಂದು ಮಾತನಾಡುತ್ತಿರುವ ವೇಳೆ ಆರೋಪಿಗಳಾದ ಹನುಮಂತಪ್ಪ ಹಾಗೂ ಮಹಾದೇವಪ್ಪ ಅವರು ಸ್ಥಳಕ್ಕೆ ಆಗಮಿಸಿ ತಾನು ಮಣಿಪಾಲ ಠಾಣೆಯ ಪೊಲೀಸ್, ನೀವು ಇಲ್ಲಿ ಯಾಕೆ ಕುಳಿತಿದ್ದೀರಿ? ನಿಮ್ಮ ಮೇಲೆ ಕೇಸ್ ಮಾಡುತ್ತೇನೆ ಎಂದು ಹೇಳಿದ್ದಾರೆ. ಬಳಿಕ ಮಣಿಪಾಲ ಠಾಣೆಯ ಎಸ್‌ಐ ಅವರಿಗೆ ಫೋನ್ ಮಾಡುತ್ತೇನೆ ಅವರು ಹೇಳಿದರೆ ಬಿಡುತ್ತೇನೆ ಎಂದು ಹೇಳಿ ಮತ್ತೋರ್ವ ಆರೋಪಿ ಲಕ್ಷ್ಮಣ ಕುಪ್ಪಗೊಂಡ ಅವರಿಗೆ ಕರೆ ಮಾಡಿ ಲೌಡ್‌ಸ್ಪೀಕರ್ ಇಟ್ಟು ಮಾತನಾಡಿದ್ದಾರೆ.

ಈ ವೇಳೆ ಆ ವ್ಯಕ್ತಿ ತಾನು ಮಣಿಪಾಲ ಠಾಣೆಯ ಎಸ್‌ಐ ಮಾತನಾಡುತ್ತಿದ್ದೇನೆ. 5 ಸಾವಿರ ರೂ.ಅವರಿಗೆ ನೀಡು ಇಲ್ಲವಾದರೆ ಜೀಪು ಕಳುಹಿಸಿ ಪೊಲೀಸ್ ಠಾಣೆಗೆ ಕರೆಸಿಕೊಳ್ಳುತ್ತೇನೆ ಎಂದು ಬೆದರಿಸಿದ ಪರಿಣಾಮ ಮಂಜುನಾಥ ಅವರು ಆರೋಪಿಗಳು ಸೂಚಿಸಿದ ಮೊಬೈಲ್ ಸಂಖ್ಯೆಂಗೆ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ್ದರು. ಅನುಮಾನಗೊಂಡ ಮಂಜುನಾಥ ಅವರು ಮಣಿಪಾಲ ಠಾಣೆಗೆ ಬಂದು ದೂರು ನೀಡಿದಾಗ ವಿಚಾರ ಬೆಳಕಿಗೆ ಬಂದಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು