News Karnataka Kannada
Friday, March 29 2024
Cricket
ಉಡುಪಿ

ಉಡುಪಿ: ಜೂನ್ 2ರಂದು ‘ನನ್ನ ಕ್ಷೇತ್ರ- ನನ್ನ ಕನಸು’ ಶಾಸಕರೊಂದಿಗೆ ಒಂದು ಸಂವಾದ ಕಾರ್ಯಕ್ರಮ

My Constituency - My Dream' will be held on June 2 with the MLAs.
Photo Credit : News Kannada

ಉಡುಪಿ: ತಿಂಗಳೆ ಪ್ರತಿಷ್ಠಾನದ ವತಿಯಿಂದ ನನ್ನ ಕ್ಷೇತ್ರ- ನನ್ನ ಕನಸು ಒಂದು ಸಂವಾದ ಕಾರ್ಯಕ್ರಮವನ್ನು ಜೂನ್ 2ರಂದು ಮಧ್ಯಾಹ್ನ 3.30ಕ್ಕೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾಗಿದ್ದು, ಈ ಸಂವಾದದಲ್ಲಿ ಜಿಲ್ಲೆಯ‌ ಐದು ಶಾಸಕರು ಭಾಗವಹಿಸಲಿದ್ದಾರೆ ಎಂದು ತಿಂಗಳೆ ಪ್ರತಿಷ್ಠಾನದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಹೇಳಿದರು.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಶ್ರೀರಾಜ ಗುಡಿ ಉಪಸ್ಥಿತರಿರಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ‌ ಶಾಸಕ ಸುನಿಲ್‌ ಕುಮಾರ್, ಕುಂದಾಪುರ ಶಾಸಕ‌ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಭಾಗವಹಿಸಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಸದಸ್ಯ ಕಿರಣ್ ಕುಮಾರ್, ಸಂತೋಷ್ ಜತ್ತನ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು