ಉಡುಪಿ: ಪುತ್ತಿಗೆ ಮಠದ ಪರ್ಯಾಯ ಪೂರ್ವಭಾವಿಯಾಗಿ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಸ್ವಾಮೀಜಿ ಹಾಗೂ ಸುಶ್ರೀಂದ್ರತೀರ್ಥ ಸ್ವಾಮೀಜಿ ದೇಶ ಪರ್ಯಾಟನೆ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಇಂದು ನವದೆಹಲಿಯಲ್ಲಿರುವ ಇಸ್ಕಾನ್ ದೇಗುಲಕ್ಕೆ ಭೇಟಿ ನೀಡಿದರು.
ಇಸ್ಕಾನ್ ದೇಗುಲಕ್ಕೆ ಆಗಮಿಸಿದ ಉಭಯ ಶ್ರೀಪಾದರನ್ನು ದೇಗುಲದ ಆಡಳಿತ ಮಂಡಳಿಯವರು ಭವ್ಯ ಸ್ವಾಗತದೊಂದಿಗೆ ಬರಮಾಡಿಕೊಂಡರು. ಶ್ರೀಪಾದರಿಗೆ ಗೌರವ ಸಮರ್ಪಣೆ ಸಲ್ಲಿಸಿದರು. ಬಳಿಕ ಶ್ರೀಪಾದರು ಭಕ್ತಾಧಿಗಳಿಗೆ ಸಾಮೂಹಿಕ ಗೀತಾ ಲೇಖನ ಯಜ್ಞ ದೀಕ್ಷಾ ನೀಡಿದರು.