News Karnataka Kannada
Thursday, April 25 2024
ಉಡುಪಿ

ಉಡುಪಿ: ಜೂ.3, 4ರಂದು ರಂಗಭೂಮಿ‌ ಆನಂದೋತ್ಸವ- 2023′ ಹಾಗೂ ಸಂಸ್ಕೃತಿ ಸಾಧಕ ಪ್ರಶಸ್ತಿ ಪ್ರದಾನ

Udupi: 'Rangabhoomi Anandotsava- 2023' and Sankruti Sadhaka award presentation on June 3rd and 4th
Photo Credit : News Kannada

ಉಡುಪಿ: ರಂಗಭೂಮಿ ಉಡುಪಿ ಇದರ ಆಶ್ರಯದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ, ಕುತ್ಪಾಡಿ ಆನಂದ ಗಾಣಿಗರ ಕುಟುಂಬಸ್ಥರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ‌ ಸಹಯೋಗದೊಂದಿಗೆ  ಜೂನ್ 3 ಮತ್ತು 4 ರಂದು ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ದಿ. ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ‘ರಂಗಭೂಮಿ‌ ಆನಂದೋತ್ಸವ- 2023’ ಕಾರ್ಯಕ್ರಮ ನಡೆಯಲಿದೆ‌.

ಉಡುಪಿಯಲ್ಲಿಂದು‌ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ರಂಗಭೂಮಿ ಉಪಾಧ್ಯಕ್ಷ ಭಾಸ್ಕರ್ ರಾವ್ ಕಿದಿಯೂರು ಅವರು, ಜೂನ್ 3ರಂದು ಸಂಜೆ 5.45ಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಅವರು ಆನಂದೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾಕಾರ್ಯಕ್ರಮದ ಬಳಿಕ ಮಂಗಳೂರಿನ ಅರೆಹೊಳೆ ಪ್ರತಿಷ್ಠಾನದ ಕಲಾವಿದರಿಂದ ‘ಧ್ವಯ’ ನಾಟಕ ಪ್ರದರ್ಶನಗೊಳ್ಳಲಿದೆ ಎಂದರು.

ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ಜೂನ್ 4ರಂದು ಸಂಜೆ 5.45ಕ್ಕೆ ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳ ಅವರಿಗೆ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ಸಂಸ್ಕೃತಿ ಸಾಧಕ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಆ ಬಳಿಕ ನಟನ ಮೈಸೂರು ತಂಡದಿಂದ ಕಣಿವೆಯ ಹಾಡು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಂಗಭೂಮಿಯ‌ ಉಪಾಧ್ಯಕ್ಷ ಎನ್. ರಾಜಗೋಪಾಲ ಬಲ್ಲಾಳ್, ಕೋಶಾಧಿಕಾರಿ ಭೋಜ ಯು., ಸದಸ್ಯ ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು