News Karnataka Kannada
Thursday, March 28 2024
Cricket
ಉಡುಪಿ

ಉಡುಪಿ: ಸಾಹಿತಿ ಮಾರ್ಪಳ್ಳಿ ಹರಿದಾಸ ರಾವ್ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

Special postal envelope released in memory of writer Marpalli Haridasa Rao
Photo Credit : News Kannada

ಉಡುಪಿ: ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ವತಿಯಿಂದ ‘ಬಾಳಿನ ಗಿಡ’ ಖ್ಯಾತಿಯ ಸಾಹಿತಿ ಮಾರ್ಪಳ್ಳಿ ಹರಿದಾಸ ರಾವ್ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮವು ಉಡುಪಿ ಪ್ರಧಾನ ಅಂಚೆ ಕಚೇರಿಯಲ್ಲಿ ಇಂದು ನಡೆಯಿತು.

ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಿದ ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠಲ ಭಟ್ ಮಾತನಾಡಿ, ವಿಶೇಷ ಅಂಚೆ ಲಕೋಟೆ ಭಾರತೀಯ ಸಂಸ್ಕೃತಿಯನ್ನು ಜನರಿಗೆ ಪರಿಚಯಿಸುವುದರ ಜೊತೆಗೆ ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಕೆಲಸ ಮಾಡುತ್ತದೆ ಎಂದರು.

ಲಕೋಟೆಯ ಮೈ ಸ್ಟಾಂಪ್ ಅನ್ನು ಹರಿದಾಸ ರಾವ್ ಅವರ ಮಗ ಡಾ. ರಾಮಕಾಂತ ರಾವ್ ಬಿಡುಗಡೆಗೊಳಿಸಿದರು. ಮಾರ್ಪಳ್ಳಿ ನಾಗಪ್ಪಯ್ಯ ಟ್ರಸ್ಟ್ ಅಧ್ಯಕ್ಷ ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ಎಂ.ಆರ್.ವಾಸುದೇವ, ಲೇಖಕಿ ಡಾ.ಸರ್ವಮಂಗಲ ಪಿ.ಆರ್., ಕವಯತ್ರಿ ವಿಜಯಲಕ್ಷ್ಮೀ ನಂದಳಿಕೆ ಮುಖ್ಯ ಅತಿಥಿಗಳಾಗಿದ್ದರು. ಮುಖ್ಯ ಅಂಚೆಪಾಲಕ ಗುರುಪ್ರಸಾದ್ ಸ್ವಾಗತಿಸಿದರು. ಸಹಾಯಕ ಅಂಚೆ ಅಧೀಕ್ಷಕ ವಸಂತ ವಂದಿಸಿದರು. ಉಡುಪಿ ಅಂಚೆ ವಿಭಾಗದ ಮಾರುಕಟ್ಟೆ ನಿರ್ವಾಹಕಿ ಪೂರ್ಣಿಮಾ ಜನಾರ್ದನ್ ಕಾರ್ಯಕ್ರಮ ನಿರೂಪಿಸಿದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು