ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಎರಡನೇ ಬಾರಿಗೆ ಸೋಲುಕಂಡಿರುವ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ರಾಜಕೀಯ ನಿವೃತ್ತಿ ಘೋಷಣೆ ಸುಳಿವು ನೀಡಿದ್ದಾರೆ.
ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸೊರಕೆ ಅವರು,ರಾಜಕೀಯ ನಿವೃತ್ತಿ ಘೋಷಣೆ ಮಾಡುವ ಬಗ್ಗೆ ಆಲೋಚನೆ ಮಾಡುತ್ತಿದ್ದೇನೆ. ನನ್ನ ಸೋಲು ಅಭಿವೃದ್ಧಿಗೆ ಆಗಿರುವ ಸೋಲು. ಬಿಜೆಪಿ ಕರಾವಳಿ ಜಿಲ್ಲೆಗಳಲ್ಲಿ ಹಿಡಿತ ಸಾಧಿಸಿದೆ. ಅಂಚೆ ಮತದಾನದಲ್ಲಿ ನನಗೆ ಬಹಳ ಹಿನ್ನಡೆಯಾಗಿತ್ತು. ರಾಜ್ಯದಲ್ಲೇ ನಮ್ಮದೆ ಸರಕಾರ ಇರುವುದರಿಂದ ಗ್ಯಾರಂಟಿ ಕಾರ್ಡ್ ಜನರಿಗೆ ತಲುಪಿಸುವ ಕಾರ್ಯ ಮಾಡುತ್ತೇನೆ ಎಂದರು.