News Karnataka Kannada
Friday, March 29 2024
Cricket
ಉಡುಪಿ

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನೀರಿನ ಅಭಾವ: ಸಂಕಷ್ಟದಲ್ಲಿ ರೋಗಿಗಳು

Water scarcity at Udupi district hospital: Patients in distress
Photo Credit : News Kannada

ಉಡುಪಿ: ನಗರ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೊಂದೆಡೆ ನೀರಿನ ಅಭಾವ ಜಿಲ್ಲಾಸ್ಪತ್ರೆಯ ರೋಗಿಗಳಿಗೂ ತಟ್ಟಿದೆ.

ಉಡುಪಿಗೆ ನೀರುಣಿಸುತ್ತಿರುವ ಸ್ವರ್ಣಾ ನದಿ ನೀರು ಬಹುತೇಕ ತಳಮಟ್ಟ ತಲುಪಿದೆ. ಹೀಗಾಗಿ, ನಗರಸಭೆ ನೀರು ಅವಲಂಬಿಸಿದ ಜನರು ತೀವ್ರ ಸಂಕಷ್ಟಕ್ಕೆ ಈಡಾಗಿದ್ದಾರೆ. ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ನಗರಸಭೆ ನೀರು ಪೂರೈಕೆಯಾಗುತ್ತಿತ್ತು. ಜೊತೆಗೆ ಬಾವಿಯ ನೀರು ಸಾಕಾಗುತ್ತಿತ್ತು. ಆದರೆ ಏಪ್ರಿಲ್ ಆರಂಭದಲ್ಲೇ ಬಾವಿ ನೀರು ಬತ್ತಿದ್ದು, ಇದರಿಂದ ನೀರಿನ ಅಭಾವ ಉಂಟಾಗಿದೆ.

ಜಿಲ್ಲಾಸ್ಪತ್ರೆ ಮತ್ತು ಅದರ ಅಧೀನದಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ನಿತ್ಯ 8 ಟ್ಯಾಂಕರ್‌ಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ಇದು ಸಾಕಾಗದೆ ಇರುವುದರಿಂದ ಈ ಹಿಂದಿನಂತೆ ರೋಗಿಗಳಿಗೆ 24 ತಾಸು ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ.

ಈ ಹಿನ್ನೆಲೆಯಲ್ಲಿ ಇವತ್ತು ಜಿಲ್ಲಾಧಿಕಾರಿ ಆಸ್ಪತ್ರೆಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಗತ್ಯ ನೀರಿನ ವ್ಯವಸ್ಥೆ ಮಾಡಿಕೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು