News Karnataka Kannada
Thursday, April 25 2024
Cricket
ಉಡುಪಿ

ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆ: ಶಾಲೆಗಳ ಆರಂಭ ಮುಂದೂಡಲು ಯಶ್ ಪಾಲ್ ಸುವರ್ಣ ಮನವಿ

ಕಾಂಗ್ರೆಸ್ ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್ ಗೆಲುವಿನ ಸಂಭ್ರಮಾಚರಣೆ ಸಂದರ್ಭದಲ್ಲಿ ವಿಧಾನ ಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಹಾಕುವ ಮೂಲಕ ಕಾಂಗ್ರೆಸ್ ಪಕ್ಷದ ದೇಶದ್ರೋಹಿ ಮುಖವಾಡ ಬಯಲಾಗಿದೆ, ಚುನಾವಣಾ ಆಯೋಗ ತಕ್ಷಣ ನಾಸೀರ್ ಹುಸೇನ್ ರಾಜ್ಯ ಸಭಾ ಸದಸ್ಯತ್ವದಿಂದ ವಜಾಗೊಳಿಸಬೇಕು ಎಂದು ಉಡುಪಿ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Photo Credit : News Kannada

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸಹಿತ ಕರಾವಳಿ ಪ್ರದೇಶ ಹಾಗೂ ರಾಜ್ಯದ ವಿವಿಧೆಡೆ ಕುಡಿಯುವ ನೀರಿನ ತೀವ್ರ ಸಮಸ್ಯೆ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಆರಂಭವನ್ನು 1 ವಾರಗಳ ಮುಂದೂಡುವಂತೆ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿ ಯವರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಶಿಕ್ಷಣ ಇಲಾಖೆಯ ಆದೇಶದಂತೆ ಮೇ 31 ರಂದು ಆರಂಭಗೊಳ್ಳಲಿದೆ.

ಈ ಬಾರಿ ಮುಂಗಾರು ಮಳೆಯ ವಿಳಂಬದಿಂದಾಗಿ ರಾಜ್ಯದ ವಿವಿಧೆಡೆ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ.

ರಾಜ್ಯದ ಹಲವು ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ಶಾಲಾ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಪೂರೈಕೆ, ಬಿಸಿಯೂಟ ಹಾಗೂ ಶಾಲೆಯ ಪರಿಸರದ ಶುಚಿತ್ವ ಕಾಪಾಡಲು ಕಷ್ಟ ಸಾಧ್ಯವಾಗಿದೆ.

ಇದರಿಂದ ಶಾಲಾ ವಿದ್ಯಾರ್ಥಿಗಳ ಆರೋಗ್ಯ ಹಾಗೂ ದೈನಂದಿನ ಚಟುವಟಿಕೆಗೆ ತೊಂದರೆಯಾಗಲಿದೆ. ಸಮಸ್ಯೆಯ ಗಂಭೀರತೆಯನ್ನು ಪರಿಗಣಿಸಿ ಶಾಲಾ ಆರಂಭವನ್ನು ಒಂದು ವಾರಗಳ ಕಾಲ ಮುಂದೂಡಿಕೆಗೆ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡುವಂತೆ ಮುಖ್ಯ ಮಂತ್ರಿ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ಯವರಿಗೆ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು