News Karnataka Kannada
Friday, April 26 2024
ಕರಾವಳಿ

ಮೂಡುಶೆಡ್ಡೆ ಗಲಭೆಗೆ ಕಾಂಗ್ರೆಸ್ ಅಭ್ಯರ್ಥಿಯೇ ಕಾರಣ, ಉಮಾನಾಥ ಕೋಟ್ಯಾನ್ ಆರೋಪ

Mangalore: Umanatha Kotyan, Congress candidate is responsible for Mooshedde riots
Photo Credit :

ಮಂಗಳೂರು: ಮೂಡುಶೆಡ್ಡೆಯಲ್ಲಿ ಬುಧವಾರ ಸಂಜೆ ನಡೆದ ಗಲಭೆಗೆ ಕಾಂಗ್ರೆಸ್ ಅಭ್ಯರ್ಥಿಯೇ ನೇರ ಕಾರಣ ಎಂದು ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಆರೋಪಿಸಿದ್ದಾರೆ.
ಗುರುವಾರ ನಗರದ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡುಶೆಡ್ಡೆಯಲ್ಲಿ ಬಿಜೆಪಿ ಮತ್ತು ಸಂಘ ಪರಿವಾರ ಜತೆಯಾಗಿ ಬಲಿಷ್ಠವಾಗಿದೆ. ಬಿಜೆಪಿ ಕಾರ್ಯಕರ್ತರು ಕುಳಿತಿದ್ದ ಚುನಾವಣ ಕೌಂಟರ್ ಬಳಿಗೆ ಬಂದು ಕಾರು ನಿಲ್ಲಿಸಿರುವುದು ಅವರು ಮಾಡಿದ ದೊಡ್ಡ ತಪ್ಪು ಎಂದರು. ಅಭ್ಯರ್ಥಿಯಾದವರು ಕಾರ್ಯಕರ್ತರನ್ನು ತಡೆಯುವ ಪ್ರಯತ್ನ ಮಾಡಬೇಕೇ ಹೊರತು, ಗಲಭೆಗೆ ಪ್ರೇರಣೆ ನೀಡಬಾರದು ಎಂದರು.

ಸಂಯಮ ವಹಿಸಿ ಕಾಂಗ್ರೆಸ್ ಪಕ್ಷದವರು ಇದ್ದಲ್ಲೇ ಕಾರು ನಿಲ್ಲಿಸಿದ್ದಲ್ಲಿ ಗಲಭೆಗೆ ಆಸ್ಪದವೇ ಇರಲಿಲ್ಲ. ದಿನವಿಡೀ ಅವರು ನೂರಾರು ಬೂತ್‌ಗಳಿಗೆ ಅವರು ಭೇಟಿ ನೀಡಿದ್ದಾರೆ. ಅಲ್ಲಿಯೂ ಬಿಜೆಪಿ ಕೌಂಟರ್‌ಗಳಿತ್ತು. ಅಲ್ಲಿ ಯಾಕೆ ಗಲಭೆ ನಡೆದಿಲ್ಲ ಎಂದು ಪ್ರಶ್ನಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು