ಹರಪನಹಳ್ಳಿ: ರಾತ್ರಿ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮೂರು ಕುರಿ ಸಜೀವದಹನ ಗೊಂಡಿದ್ದು, ರೈತರು ಬೆಳೆದಿದ್ದ ಧವಸ, ಧಾನ್ಯಗಳು ಬೆಂಕಿಗೆ ಆಹುತಿಯಾಗಿ ಮೂರುವರೆ ಲಕ್ಷ ರೂಪಾಯಿ ನಷ್ಟ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ಘಟನೆ ಶುಕ್ರವಾರ ಸಂಭವಿಸಿದೆ.
ಹಲುವಾಗಲು ಆನಂದಪ್ಪ ಅವರಿಗೆ ಸೇರಿದ ಗುಡಿಸಲಿಗೆ ಬೆಂಕಿ ತಗುಲಿದ್ದು, ಮೂರು ಕುರಿಗಳು, ಟ್ರಾಕ್ಟರ್ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ. 25 ಕ್ವಿಂಟಲ್ ಅಲಸಂದಿ ಸುಟ್ಟು ಬೂದಿಯಾಗಿದೆ. ಹೊಲದಲ್ಲಿದ್ದ ಕುಟುಂಬದ ಮೂರು ಜನ, ಇನ್ನೊಂದು ಮನೆಗೆ ಊಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಘಟನಾ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ ಹಾನಿ ಪರಿಶೀಲಿಸಿದ್ದಾರೆ. ಬೆಂಕಿ ಅವಘಡದಿಂದ ನಷ್ಟ ಅನುಭವಿಸಿದ ಕುಟುಂಬಕ್ಕೆ ಪರಿಹಾರ ನೀಡುವಂತೆ ಗ್ರಾಮದ ಬೋವಿ ರಾಮಚಂದ್ರ ಒತ್ತಾಯಿಸಿದ್ದಾರೆ.