News Kannada
Saturday, December 02 2023
ಉತ್ತರಕನ್ನಡ

ಕಾರವಾರ: ಮೀನುಗಾರರ ಅಭಿವೃದ್ಧಿಗೆ ಕ್ರಮ- ಎಸ್. ಅಂಗಾರ್

Steps taken for the development of fishermen Angar
Photo Credit : By Author

ಕಾರವಾರ: ಮೀನುಗಾರರು ಮೀನುಗಾರಿಕೆಯನ್ನಷ್ಟೇ ಅಲ್ಲ ಮಾರಾಟವನ್ನೂ ಮಾಡಬೇಕು ಎನ್ನುವ ನಿಟ್ಟಿನಲ್ಲಿ ಮೀನುಗಾರರಿಗೆ ವಾಹನ ಕೊಡುವ ಬಗ್ಗೆ ಯೋಚನೆ ಮಾಡಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ವಾಹನ ಕೊಡುವ ಸಂಬಂಧ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ. ಅದಕ್ಕೆ ಸ್ಥಳೀಯ ಶಾಸಕರು, ಸಂಸದ, ಸ್ಥಳೀಯರ ಮಾಹಿತಿ ಅಗತ್ಯ ಇತ್ತು. ಅದಕ್ಕಾಗಿ ಉತ್ತರ ಕನ್ನಡ ಜಿಲ್ಲೆಯ ಕೆಲ ಸ್ಥಳಗಳಿಗೆ ಭೇಟಿ ಮಾಡಿದ್ದೇನೆ. ಮೀನುಗಾರಿಕೆಗೆ ಹೂಳಿನ ಸಮಸ್ಯೆ ಇರುವ ಬಗ್ಗೆ ಹೇಳಿದ್ದಾರೆ. ಸಭೆ ಮಾಡಿಯೂ ಮಾಹಿತಿ ಸಂಗ್ರಹಿಸಲಾಗಿದೆ. 20 ದಿನಗಳು ಕಳೆದ ನಂತರ ಮತ್ತೆ ಜಿಲ್ಲೆಗೆ ಬಂದು ಪ್ರಗತಿ ಪರಿಶೀಲನೆ ಮಾಡುವುದಾಗಿ ತಿಳಿಸಿದರು.

ಹೊನ್ನಾವರ ಬಂದರು ವಿಚಾರ ಕೂಡ ಸಭೆಯಲ್ಲಿ ಚರ್ಚೆಯಾಗಿದೆ. ಕಾಲಮಿತಿಯೊಳಗೆ ಕಾಮಗಾರಿ ಮುಗಿಸಬೇಕು. ಅಲ್ಲಿ ಜನರ ವಿರೋಧ ಇದ್ದರೂ, ಅಭಿವೃದ್ಧಿ ಕೆಲಸಕ್ಕೆ ಜನರು ಸಹಕಾರ ಕೊಡಬೇಕು. ಜನರಿಗೆ ಒಂದಷ್ಟು ತೊಂದರೆ ಆದರೂ ಕೂಡ ಮೀನುಗಾರರ ಹಿತವನ್ನು ಇಟ್ಟುಕೊಂಡೇ ಯೋಜನೆ ಮಾಡಲಾಗಿದೆ ಎಂದು ಹೊನ್ನಾವರದಲ್ಲಿ ನಿರ್ಮಾಣವಾಗುತ್ತಿರುವ ಖಾಸಗಿ ಬಂದರು ಯೋಜನೆಯನ್ನು ಸಮರ್ಥಿಸಿಕೊಂಡರು.

See also  ಅಕ್ರಮವಾಗಿ ನಾಡ ಬಂದೂಕು ಹೊಂದಿರುವ ವ್ಯಕ್ತಿಯೋರ್ವನ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು