News Kannada
Thursday, October 05 2023
ಉತ್ತರಕನ್ನಡ

ಕಾರವಾರ: ಅಧಿಕಾರಿಗೆ ಬೆದರಿಕೆ ಹಾಕಿದ್ದ ಬೆಂಗಳೂರು ಮೂಲದ ಇಬ್ಬರ ಬಂಧನ

Karwar: Two from Bengaluru arrested for threatening officer
Photo Credit : By Author
ಕಾರವಾರ: ವರದಿಗಾರರು ಎಂದು ಅಧಿಕಾರಿಯೊಬ್ಬರನ್ನು ಹೆದರಿಸಿ ಹಣ ಕೊಡುವಂತೆ ಬೆದರಿಕೆ ಹಾಕಿದ್ದ ಇಬ್ಬರನ್ನು  ಕಾರವಾರ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಮೂಲದ ಸಮಂತ ನಾರಾಯಣ ರಾವ್ ಹಾಗೂ ವಿಜಯ ಚಲುವರಂಗಯ್ಯ ಎನ್ನುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಈ ಇಬ್ಬರು ಆರೋಪಿಗಳು ಕಾರವಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೋರ್ವರಿಗೆ ದೂರವಾಣಿ ಮೂಲಕ ಕರೆ ಮಾಡಿ ತಾವು ಕರ್ನಾಟಕದ ಪ್ರಮುಖ ಸುದ್ದಿವಾಹಿನಿಯವರಾಗಿದ್ದು ನೀವು ಅಕ್ರಮವಾಗಿ ಹಣ ಹಾಗೂ ಆಸ್ತಿ ಸಂಪಾದಿಸಿದ್ದೀರಿ.
ಅದನ್ನು ನಾವು ಸುದ್ದಿ ವಾಹಿನಿಯಲ್ಲಿ ವೈರಲ್ ಮಾಡಬಾರದು ಎಂದಾದರೆ ತಮಗೆ 50 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಆದರೆ ಬೆದರಿಕೆಗೆ ಜಗ್ಗದ ಅಧಿಕಾರಿಯು ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಕಾರವಾರ ನಗರಠಾಣೆ ಪೊಲೀಸರು ತನಿಖೆ ಕೈಗೊಂಡು ಬೆಂಗಳೂರಿಗೆ ತೆರಳಿ  ಇಬ್ಬರೂ ಆರೋಪಿಗಳನ್ನು ಬಂಧಿಸಿ ಕರೆ ತಂದಿದ್ದಾರೆ.
ಆರೋಪಿಗಳಿಂದ ನಾಲ್ಕು ಮೊಬೈಲ್ ಹಾಗೂ ಒಂದು ಕಾರು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರು ಪಡಿಸಲಾಗಿದ್ದು ತನಿಖೆ ಮುಂದುವರಿದಿದೆ.
ಕಾರ್ಯಾಚರಣೆಯಲ್ಲಿ ಸಂತೋಷ ಕುಮಾರ್ ಎಂ., ಪಿ.ಎಸ್.ಐ ಕಾರವಾರ ನಗರ ಠಾಣೆ ಮತ್ತು ಸಿಬ್ಬಂದಿಗಳಾದ ಜಟ್ಟಿ ನಾಯ್ಕ್, ಸೂರಜ್ ನಾಯ್ಕ್, ಪಿಸಿ – ರಾಜೇಶ್ ನಾಯಕ, ರಾಮಾ ನಾಯ್ಕ್, ನಾಂದ್ರೆ, ರಮೇಶ್ ಇತರರು ಕಾರ್ಯಾಚರಣೆ ತಂಡದಲ್ಲಿದ್ದರು.
See also  ಮೈಸೂರು: ರೈಲು ನಿಲ್ದಾಣ ವಿಸ್ತರಣೆ ಕುರಿತು ಚರ್ಚೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು