News Kannada
Monday, October 02 2023
ಉತ್ತರಕನ್ನಡ

ಕಾರವಾರ: ಆತ್ಮ ಯೋಜನೆಯ ಬಗ್ಗೆ ರೈತರಿಗೆ ಮಾರ್ಗದರ್ಶನ ನೀಡಿ ಎಂದ ಸಿಇಒ

Karwar: Ceo asks farmers to guide them on Atma Yojana
Photo Credit : By Author

ಕಾರವಾರ: ಆತ್ಮ ಯೋಜನೆಯಡಿ ಕೈಗೊಂಡತಹ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ರೈತರು ಮಾಹಿತಿ ಪಡೆದು ಅದರ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ತಮ್ಮ ಕ್ಷೇತ್ರ ಮಟ್ಟದಲ್ಲಿ ಅಳವಡಿಸಿಕೊಳ್ಳುವಂತೆ ಅಧಿಕಾರಿಗಳು ಮಾರ್ಗದರ್ಶನ ನೀಡಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ಆತ್ಮ ಯೋಜನೆಯ ೨೦೨೨-೨೩ ನೇ ಸಾಲಿನ ಅನುಷ್ಠಾನದ ಬಗ್ಗೆ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಮುದ್ರ ಪಾಚಿ ಪ್ರಾತ್ಯಕ್ಷಿಕೆಯ ಫಲಶೃತಿ ಹಾಗೂ ಕ್ಷೇತ್ರ ವಿಸ್ತರಣೆ ಮತ್ತು ಸಾಧಕ ಭಾದಕಗಳ ಬಗ್ಗೆ ವರದಿ ನೀಡಬೇಕು ಎಂದು ಮೀನುಗಾರಿಕಾ ಉಪನಿರ್ದೇಶಕರಿಗೆ ಸೂಚಿಸಿದರು.

ಕಳೆದ ಸಾಲಿನಲ್ಲಿ ಕೈಗೋಡಂತಹ ಅಭಿವೃದ್ಧಿ ಕಾರ್ಯಗಳನ್ನು ಯಾವ ರೀತಿ ನಡೆಸಲಾಗಿತ್ತು ಹಾಗೂ ಈ ಪ್ರಸಕ್ತ ಸಾಲಿನಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಯಾವ ರೀತಿ ಬದಲಾವಣೆಗಳನ್ನು ತರಬಹುದು, ಹಾಗೂ ಇನ್ನೂ ಹೇಗೆಲ್ಲಾ ನವೀಕರಿಸಬಹುದು ಎಂದು ಅಧಿಕಾರಿಗಳು ಸಲಹೆ ನೀಡಬೇಕು ಎಂದು ಎಲ್ಲಾ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.

ಭಟ್ಕಳ ಮತ್ತು ಹೊನ್ನಾವರ ತಾಲೂಕುಗಳಲ್ಲಿ ಲಾವಂಜ ಬೆಳೆಯುವ ಬಗ್ಗೆ ಹಾಗೂ ತರಬೇತಿಯನ್ನು ಆಯೋಜಿಸಲು ಮತ್ತು ಜಿಲ್ಲೆಯಲ್ಲಿ ನಿರ್ಧಿಷ್ಟ ಬೆಳೆಯ ಉತ್ಪನ್ನ ಆಧಾರಿತ ರೈತ ಮೇಳಗಳನ್ನು ಆಯೋಜಿಸಲು ಸೂಚಿಸಿ, ಪಸ್ತುತ ಸಾಲಿನಲ್ಲಿ ಆತ್ಮ ಯೋಜನೆಯಲ್ಲಿ ಕೈಗೊಳ್ಳಬೇಕಾದ ವಿವಿಧ ಚಟುವಟಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿದರು. ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪ ಗೌಡ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಪ್ರಾಜೆಕ್ಟ್ ಆಫೀಸರ್ ಕರೀಮ್ ಆಸಾದಿ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಹಾಗೂ ವಿಜ್ಞಾನಿಗಳು, ಕದಂಬ ಮಾರ್ಕೆಟಿಂಗ್ ಸೂಸೈಟಿ ವಿಶ್ವೇಶ್ವರ ಭಟ್ಟ, ನಬಾರ್ಡ ವ್ಯವಸ್ಥಾಪಕರು ಹಾಗೂ ಇನ್ನಿತರ ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

See also  ಪ್ರತಿ ಜಿಲ್ಲೆಗಳಲ್ಲಿ ಸಿ ಎನ್ ಜಿ ಬಸ್ ಸಂಚಾರ : ಸಚಿವ ಬಿ. ಶ್ರೀರಾಮುಲು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು