News Kannada
Tuesday, December 12 2023
ಉತ್ತರಕನ್ನಡ

ಕಾರವಾರ: ಅಮೃತ ಮಹೋತ್ಸವಕ್ಕೆ ರಾಷ್ಟ್ರಧ್ವಜ ಒದಗಿಸಲು ಜಿಲ್ಲಾಡಳಿತ ಮತ್ತು ಜಿಪಂ ಸಿದ್ಧತೆ

Karwar: The district administration and jilla parishad are all set to provide the national flag for Amrit Mahotsav.
Photo Credit : By Author

ಕಾರವಾರ: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಜಿಲ್ಲೆಯಾದ್ಯಂತ ರಾಷ್ಟ್ರಧ್ವಜ ತಯಾರಿಸಿ ಒದಗಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಿದ್ಧತೆಯನ್ನು ಮಾಡಿಕೊಂಡಿದೆ. ಕೇಂದ್ರ ಮತ್ತುರಾಜ್ಯ ಸರ್ಕಾರದ ವಿಶೇಷ ನಿರ್ದೇಶನದ ಮೇರೆಗೆಅಭಿಯಾನಕ್ಕೆ ಮೆರಗು ಸಿಕ್ಕಿದ್ದು,ಉತ್ತರ ಕನ್ನಡ ಜಿಲ್ಲೆಯ ಸಂಜೀವಿನಿ ಸ್ವ ಸಹಾಯ ಗುಂಪಿನ ಮಹಿಳೆಯರು ಜಿಲ್ಲೆಯ ಪ್ರತಿ ಮನೆ, ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಗೌರವ ಪೂರ್ವಕವಾಗಿ ಹಾರಿಸುವ ನಿಟ್ಟಿನಲ್ಲಿ ಧ್ವಜವನ್ನು ತಯಾರಿಸಿ ಪೂರೈಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ವಿಶೇಷವಾಗಿ ಸ್ವಾತಂತ್ಯೋತ್ಸವದ ಅಮೃತ ಮಹೋತ್ಸವ ಆಚರಿಸುವ ಅಂಗವಾಗಿ ಪ್ರತಿ ಮನೆ ಮನೆ ಮೇಲೂ ರಾಷ್ಟ್ರ ಧ್ವಜವನ್ನು ಆಗಸ್ಟ್ 13 ರಿಂದ 15 ರ ವರೆಗೆ ಹಾರಿಸುವ ಮೂಲಕ ದೇಶಪ್ರೇಮ, ದೇಶಭಕ್ತಿಯನ್ನು ಮೆರೆಯುವ ಉದ್ದೇಶ ಹೊಂದಿದೆ. ಉತ್ತರಕನ್ನಡ ಜಿಲ್ಲೆಯಾದ್ಯಂತ ಸಂಜೀವಿನಿ ಸ್ವ ಸಹಾಯ ಮಹಿಳಾ ಒಕ್ಕೂಟದ ಸದಸ್ಯರು ತಯಾರಿಸಿರುವ ರಾಷ್ಟ್ರ ಧ್ವಜವನ್ನುಎಲ್ಲಾ ತಾಲೂಕುಗಳ ಪ್ರತಿ ಗ್ರಾಮ ಪಂಚಾಯತಿಗಳಿಗೆ 260 ರಂತೆಜಿಲ್ಲೆಯಾ 229 ಪಂಚಾಯತಿಗಳಿಗೆ ಒಟ್ಟಾರೆ 60 ಸಾವಿರ ಧ್ವಜಗಳನ್ನು ತಯಾರಿಸಿ ಪೂರೈಸಲು ಯೋಜನೆಯನ್ನು ರೂಪಿಸಲಾಗಿದೆ.

ಜಿಲ್ಲೆಯಲ್ಲಿ ರಾಷ್ಟ್ರಧ್ವಜವನ್ನು ತಯಾರಿಸುವ ಕಾರ್ಯವನ್ನು ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದ ಕಾತ್ಯಾಯಣಿ ಸಂಜೀವಿನಿ ಗ್ರಾಮ ಪಂಚಾಯತ ಮಟ್ಟದ ಒಕ್ಕೂಟ ಮತ್ತು ಕುಮಟಾ ತಾಲೂಕಿನ ಕಾಗಲ ಗ್ರಾಮದ ಮಕರಂದ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳ ಮೂಲಕ ತಯಾರಿಸಲಾಗುತ್ತಿದ್ದು. ಪ್ರತಿ ಒಕ್ಕೂಟಗಳಲ್ಲಿ 85 ರಿಂದ 90 ಮಹಿಳಾ ಸದಸ್ಯರು ರಾಷ್ಟ್ರಧ್ವಜ ತಯಾರಿಕೆಯಲ್ಲಿ ನಿರತರಾಗಿದ್ದಾರೆ ಹಾಗೂ ಜಿಲ್ಲೆಯಇತರೆ ತಾಲೂಕುಗಳಿಗೆ ರಾಷ್ಟ್ರಧ್ವಜ ಪೂರೈಕೆದಾರರಾಗಿ ಆಯಾ ತಾಲೂಕಿನ ಒಂದು ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟವನ್ನು ನೋಡಲ್ ಆಗಿ ಆಯ್ಕೆ ಮಾಡಿ, ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಧ್ವಜಗಳನ್ನು ಪೂರೈಸುವ ಜವಾಬ್ದಾರಿಯನ್ನು ನೀಡಲಾಗಿದೆ. ಸ್ವಾತಂತ್ಯೋತ್ಸವದ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ “ರಾಷ್ಟ್ರಧ್ವಜ ತಯಾರಿಸುವ ಮೂಲಕ ದೇಶ ಸೇವೆ ಮಾಡಲು ಮತ್ತು ತನ್ಮೂಲಕ ದೇಶಪ್ರೇಮ ಮೆರೆಯಲು ತಮಗೊಂದು ಸದಾವಕಾಶ ಸಿಕ್ಕಿದೆ ಎಂದು ಒಕ್ಕೂಟದ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹರ್‌ಘರ್‌ ತಿರಂಗಾ ಅಭಿಯಾನಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಸಕಲ ಸಿದ್ಧತೆ ಮಾಡಿಕೊಂಡಿದೆ. 2022 ರ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ವ ಸಹಾಯ ಗುಂಪಿನ ಮಹಿಳೆಯರಿಂದ ತಯಾರಿಸಿದ ರಾಷ್ಟ್ರ ಧ್ವಜವನ್ನು ಪ್ರತಿ ಮನೆ ಮನೆಗಳ ಮೇಲೂ ಹಾರಿಸುತ್ತಿರುವುದು ವಿಶೇಷವಾಗಿದೆ ಈ ನಿಟ್ಟಿನಲ್ಲಿ ಎಲ್ಲರೂ ರಾಷ್ಟ್ರೀಯ ಭಾವೈಕ್ಯತೆ ಹಾಗೂ ರಾಷ್ಟ್ರ ಪ್ರೇಮವನ್ನು ಮೆರೆಯಬಹುದಾಗಿದೆ ಎಂದು ಜಿಪಂ ಸಿಇಒ ಪ್ರಿಯಾಂಗಾ ಎಂ ಪ್ರತಿಕ್ರಿಯಿಸಿದ್ದಾರೆ.

See also  ಚಾಮರಾಜನಗರ: ಜು.13, ಚಾಮರಾಜೇಶ್ವರಸ್ವಾಮಿ ರಥೋತ್ಸವ 
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು