News Kannada
Saturday, June 03 2023
ಉತ್ತರಕನ್ನಡ

ಗೋಕರ್ಣ: ಕೋಪಕ್ಕೆ ತಾಳ್ಮೆಯೇ ಮದ್ದು ಎಂದ ರಾಘವೇಶ್ವರ ಶ್ರೀ

Problems, challenges are life's opportunities, says Raghaveshwara Sri
Photo Credit : Facebook
ಗೋಕರ್ಣ: ಕೋಪಕ್ಕೆ ತಾಳ್ಮೆಯೇ ಮದ್ದು. ನಮ್ಮ ಮೇಲೆ ಬೇರೆಯವರು ಸಿಟ್ಟು ಮಾಡಿಕೊಂಡಾಗ ಅದಕ್ಕೆ ಕೋಪ ಪ್ರತ್ಯುತ್ತರವಲ್ಲ; ಸಮಾಧಾನ ಅಥವಾ ಉದಾಸೀನವೇ ಕೋಪಕ್ಕೆ ಸೂಕ್ತ ಉತ್ತರ. ಕೋಪಕ್ಕೆ ತಾಳ್ಮೆ ದಂಡನೆಯೂ ಆಗಬಲ್ಲದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ಕರೆ ನೀಡಿದರು.
ಗೋಕರ್ಣದ ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಶನಿವಾರನಡೆದ ಧರ್ಮಸಭೆಯಲ್ಲಿ ಪರಮಪೂಜ್ಯರು ಆಶೀರ್ವಚನ ನೀಡಿದರು.
ಕೋಪಕ್ಕೆ ಪ್ರತೀಕಾರ ಉತ್ತರವಲ್ಲ; ಅಂಥ ಪ್ರತೀಕಾರದ ಪರಿಣಾಮ ಘೋರವಾಗುತ್ತದೆ. ಪ್ರತೀಕಾರದಿಂದ ಎರಡೂ ಕಡೆ ಹಾನಿಯಾಗುತ್ತದೆ. ಕೋಪಕ್ಕೆ ಕೋಪ, ತಾಪಕ್ಕೆ ತಾಪ ಉತ್ತರವಲ್ಲ ಎಂದು ನಿದರ್ಶನ ಸಹಿತ ವಿವರಿಸಿದರು. ವಿಶ್ವದಲ್ಲಿ ತಾಳ್ಮೆಯಿಂದ ಸಾಧನೆ ಮಾಡಿದವರು ಇದ್ದಾರೆಯೇ ವಿನಃ ಕೋಪದಿಂದ ಸಾಧನೆ ಮಾಡಿದ ನಿದರ್ಶನ ಇಲ್ಲ. ತಾಳ್ಮೆಗೆ ಬಲುದೊಡ್ಡ ಶಕ್ತಿ ಇದೆ. ತಾಳ್ಮೆ ಹಾಗೂ ಸದ್ಗುಣಗಳ ಸಂಪತ್ತು ಎಲ್ಲರಿಗೂ ದೊರಕಲಿ ಎಂದು ಆಶಿಸಿದರು.
ವಸಿಷ್ಠ, ವಿಶ್ವಾಮಿತ್ರರ ಯುದ್ಧದಲ್ಲಿ ವಿಶ್ವಾಮಿತ್ರರ ದಾಳಿಗೆ ಪ್ರತೀಕಾರ ಕೈಗೊಳ್ಳುವ ಬದಲು ವಸಿಷ್ಠರು ಹೂಂ ಕಾರ ಮಾಡುತ್ತಾರೆ. ಇದೇ ವಿಶ್ವಾಮಿತ್ರರ ಸೈನ್ಯ ನಾಶಕ್ಕೆ ಕಾರಣವಾಗುತ್ತದೆ. ತಮ್ಮ ಮೇಲೆ ಶಸ್ತ್ರ ಪ್ರಯೋಗ ನಡೆದಾಗಲೂ ವಸಿಷ್ಠರು ಬ್ರಹ್ಮದಂಡವನ್ನು ಹಿಡಿದು ತಾಳ್ಮೆಯಿಂದ ನಿಂತು ಎದುರಿಸಿದರು. ಸಮಾಧಾನದ ಮುಂದೆ ಎಲ್ಲ ಅಸ್ತ್ರಗಳೂ ಸೋಲುತ್ತವೆ ಎಂದು ಮಾರ್ಮಿಕವಾಗಿ ನುಡಿದರು.
ಶಸ್ತ್ರಕ್ಕಿಂತ ಶಾಸ್ತ್ರ ಮೇಲು. ವಸಿಷ್ಠರಿಗೆ ಈ ಸಮಾಧಾನ ದೊರಕಿದ್ದು ಘೋರ ತಪಸ್ಸಿನಿಂದ ಎನ್ನುವುದು ಈ ಯುದ್ಧದಲ್ಲಿ ವಿಶ್ವಾಮಿತ್ರನಿಗೆ ಮನವರಿಕೆಯಾಗಿ, ಬ್ರಹ್ಮರ್ಷಿ ಪದವಿ ಪಡೆಯುವ ಸಲುವಾಗಿ ಘೋರ ತಪಸ್ಸಿಗೆ ಮುಂದಾದರು ಎಂದು ವಿವರಿಸಿದರು.
ಮತ್ತೊಂದು ನಿದರ್ಶನ ನೀಡಿದ ಶ್ರೀಗಳು, ಅಸಹನೆಯ ಯುವಕನೊಬ್ಬ ಬುದ್ಧನನ್ನು ಒಮ್ಮೆ ವಾಚಾಮಗೋಚರವಾಗಿ ಬಯ್ಯುತ್ತಾನೆ. ಬೋಧನೆ ಮಾಡುವ ಅಧಿಕಾರ ನಿನಗೆ ನೀಡಿದವರು ಯಾರು ಎಂದು ವಿನಾಕಾರಣ ಆತನನ್ನು ಹೀಗಳೆಯುತ್ತಾನೆ. ಆಗ ಬುದ್ಧ ಒಂದು ಪ್ರಶ್ನೆ ಮುಂದಿಡುತ್ತಾನೆ. ನೀನು ಉಡುಗೊರೆ ಖರೀದಿ ಮಾಡಿದಾಗ ಅದನ್ನು ಕೊಡಬೇಕೆಂದುಕೊಂಡ ವ್ಯಕ್ತಿ ಅದನ್ನು ನಿರಾಕರಿಸಿದಾಗ ಅದು ಯಾರಿಗೆ ಸಲ್ಲುತ್ತದೆ ಎಂದು ಬುದ್ಧ ಪ್ರಶ್ನಿಸುತ್ತಾನೆ. ಆಗ ನನ್ನಲ್ಲೇ ಉಳಿಯುತ್ತದೆ ಎಂದು ಯುವಕ ಹೇಳುತ್ತಾನೆ. ನೀನು ಇಷ್ಟರವರೆಗೆ ನೀಡಿದ ಉಡುಗೊರೆಯನ್ನು ನಾನು ಸ್ವೀಕರಿಸುವುದಿಲ್ಲ; ನಿನ್ನಲ್ಲೇ ಉಳಿಯಲಿ ಎಂದು ಬುದ್ಧ ಹೇಳಿದಾಗ ಯುವಕನಿಗೆ ತನ್ನ ತಪ್ಪಿನ ಅರಿವಾಗುತ್ತದೆ ಎಂದು ಬಣ್ಣಿಸಿದರು.
ಬೇರೆಯವರು ನಮ್ಮ ಮೇಲೆ ಸಿಟ್ಟುಗೊಂಡಾಗ ನಾವು ಸಮಾಧಾನದಿಂದಲೇ ಅದನ್ನು ಎದುರಿಸಬೇಕು ಆಗ ಜಯ ನಮ್ಮದಾಗುತ್ತದೆ ಎಂದರು.  ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಅವರು ಶ್ರೀಗಳಿಂದ ಆಶೀರ್ವಾದ ಪಡೆದರು. ಧಾರ್ಮಿಕ ಕಾರ್ಯಕ್ರಮದಲ್ಲಿ ರುದ್ರಹವನ, ರಾಮತಾರಕ ಹವನ, ಚಂಡೀಪಾರಾಯಣ, ನವಚಂಡಿ ಹವನ, ಗಣಪತಿ ಹವನ ನಡೆಯಿತು.
See also  ಉತ್ತರ ಕನ್ನಡ: ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ಪತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು