News Kannada
Monday, June 05 2023
ಉತ್ತರಕನ್ನಡ

ಕಾರವಾರ: ಕದ್ರಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುವ ಸೂಚನೆ

Karwar: Release of excess water from Kadra dam
Photo Credit : By Author

ಕಾರವಾರ: ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲು ತಾಲೂಕಿನ ಕದ್ರಾ ಜಲಾಶಯದ ಒಳ ಹರಿವಿನ ಮಟ್ಟ ಏರುತ್ತಿದ್ದು ಜಿಲ್ಲಾಡಳಿತ ನಿಗದಿಪಡಿಸಿದ ಗರಿಷ್ಟ ಮಟ್ಟವನ್ನು ಕಾಯ್ದುಕೊಳ್ಳುವ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಹೊರ ಬಿಡಲಾಗುತ್ತದೆ ಎಂದು ಕೆಪಿಸಿಎಲ್ ತಿಳಿಸಿದೆ.

ಈ ಸಂದರ್ಭದಲ್ಲಿ ಜಲಾಶಯದ ಕೆಳ ಭಾಗದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. ಕಾಳಿ ನದಿಯೋಜನೆ 2 ನೇ ಹಂತದ ತಾಲೂಕಿನ ಕದ್ರಾ ಅಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿದ್ದು ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿರುತ್ತದೆ .

ಮಳೆಗಾಲದ ಅವಧಿಯಲ್ಲಿ ಜಿಲ್ಲಾಡಳಿತ ಉತ್ತರಕನ್ನಡ ನಿಗದಿಪಡಿಸಿರುವ ಕದ್ರಾ ಜಲಾಶಯದ ಗರಿಷ್ಠ ಮಟ್ಟ 31.00 ಮೀಟರಗಳಾಗಿದ್ದು ಬುಧವಾರ ಜಲಾಶಯದ ಮಟ್ಟ 30.65 ಮೀಟರ್ ಆಗಿದ್ದು ಹಾಗೂ ಒಳಹರಿವಿನ ಪ್ರಮಾಣ 22,616 ಕ್ಯುಸೆಕ್ಸ್ ಆಗಿದೆ. ಅಲ್ಲದೇ 08.08.2022 ರಂದು ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣೆ ಕೇಂದ್ರದಿಂದ ಮಳೆ ಅಲರ್ಟ್ ಘೋಷಿಸಿದ್ದು ಹೆಚ್ಚು ಮಳೆಯಾಗುವ ಸಂಭವವಿರುವದರಿಂದ ಇದೇ ರೀತಿಯಲ್ಲಿ ಜಲಾಶಯಕ್ಕೆ ನೀರಿನ ಒಳಹರಿವು ಮುಂದುವರೆದರೆ ಕಡಿಮೆ ಜಲಸಂಗ್ರಹಣಾ ಸಾಮರ್ಥ್ಯವುಳ್ಳ ಕದ್ರಾ ಜಲಾಶಯವು 31.00 ಮೀಟರ ಮಟ್ಟವನ್ನು ಶೀಘ್ರವೇ ತಲುಪುವ ಸಾಧ್ಯತೆ ಇರುತ್ತದೆ . ಆದ್ದರಿಂದ ಜಲಾಶಯದ ಮಟ್ಟ 31.00 ಮೀಟರಗಳನ್ನು ಕಾಯ್ದುಕೊಳ್ಳ ಬೇಕಾಗಿರುವುದರಿಂದ ಹೆಚ್ಚುವರಿಯಾದ ಜಲಾಶಯದ ನೀರನ್ನು ಹೊರಬಿಡಲಾಗುವುದು.

ಆಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ದಂಡೆಯ ಪಾತ್ರದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ , ಜಾನುವಾರು ವಗೈರೆಗಳೊಂದಿಗೆ ಜಿಲ್ಲಾಡಳಿತ ನಿಗದಿಪಡಿಸಿರುವ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಸೂಚಿಸಲಾಗಿದೆ. ಜೊತೆಗೆ ಕದ್ರಾ ಅಣೆಕಟ್ಟೆಯ ಕೆಳಭಾಗದಲ್ಲಿ ದೋಣಿ ಸಂಚಾರ , ಮೀನುಗಾರಿಕೆ ಮತ್ತು ಇತರೆ ಚಟುವಟಿಕೆಗಳನ್ನು ಮಳೆಗಾಲದ ಅವಧಿಯಲ್ಲಿ ನಡೆಸದಂತೆ ಮನವಿ‌ಮಾಡಲಾಗಿದೆ.

See also  ಧ್ವನಿವರ್ಧಕ ವಿವಾದ: ಹೈಕೋರ್ಟ್ ಗೆ ವರದಿ ಸಲ್ಲಿಸಿದ ಕರ್ನಾಟಕ ಸರ್ಕಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು