News Kannada
Saturday, September 30 2023
ಉತ್ತರಕನ್ನಡ

ಕಾರವಾರ: ಭೀಮ್‌ಕೋಲ್ ಕೆರೆ ದಡದಲ್ಲಿ ಸರಕಾರದ ಅದೇಶದಂತೆ ಹಿರಿಯ ನಾಗರಿಕರಿಂದ ರಾಷ್ಟ್ರ ಧ್ವಜಾರೋಹಣ

Senior citizens hoist national flag on the banks of Bheem Kol lake as per government orders
Photo Credit : By Author

ಕಾರವಾರ: ಜಿಲ್ಲೆಯ ಕಾರವಾರ ತಾಲೂಕಿನ ಹಣಕೋಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಟೆಗಾಳಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಮೃತ ಸರೋವರ ಅಭಿಯಾನದ ಅಂಗವಾಗಿ ಅಭಿವೃದ್ಧಿಪಡಿಸಲಾದ ಭೀಮ್‌ಕೋಲ್ ಕೆರೆಯ ದಂಡೆಯ ಮೇಲೆ ಸೋಮವಾರ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಧ್ವಜಾರೋಹಣವನ್ನು* ಕೇಂದ್ರ ಸರಕಾರದ ಆದೇಶದಂತೆ ಗ್ರಾಮದ ಹಿರಿಯ ನಾಗರಿಕರಾದ ಶಾಂತಾರಾಮ್ ಥಾಮಸೆ ಅವರಿಂದ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕ ಪಂಚಾಯತ್‌ನ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಬಾಲಪ್ಪನವರ ಆನಂದಕುಮಾರ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ದೊರೆಯಿತು 75 ವರ್ಷ ಪೂರೈಸಿದ ಹಿನ್ನಲೆಯಲ್ಲಿ ದೇಶದಾದ್ಯಂತ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ.

ಅಲ್ಲದೇ ಕೇಂದ್ರ ಸರಕಾರ ಅಮೃತ ಸರೋವರ ಅಭಿಯಾನ ಹಮ್ಮಿಕೊಂಡಿದ್ದು, ಇದೆಲ್ಲದರ ಪ್ರಯುಕ್ತ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಭೀಮ್‌ಕೋಲ್ ಕೆರೆಯನ್ನು ಅಭಿವೃದ್ಧಿಪಡಿಸಲಾಗಿದೆ. ಈ ಅಭಿವೃದ್ಧಿ ಕಾಮಗಾರಿಯಲ್ಲಿ ತಾಲೂಕು, ಗ್ರಾಮ ಪಂಚಾಯತಿ ಹಾಗೂ ನರೇಗಾ ಸಿಬ್ಬಂದಿ ಸಾಕಷ್ಟು  ಶ್ರಮವಹಿಸಿ ಕಾರ್ಯನಿರ್ವಹಿಸಿದ್ದಾರೆ ಎಂದರು.

ಭೀಮ್‌ಕೋಲ್ ಕೆರೆ ಈಗ ಪ್ರವಾಸಿಗರ ಆಕರ್ಷಣೆಯ ತಾಣವಾಗಿ ಮಾರ್ಪಟ್ಟಿದ್ದು, ಜಿಲ್ಲೆಯಲ್ಲದೇ ಬೇರೆ ಬೇರೆ ಕಡೆಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಪ್ರಕೃತಿಯ ಮಡಿಲಿನಲ್ಲಿರುವ ಈ ಅತ್ಯಂತ ಸುಂದರ ಪ್ರೇಕ್ಷಣಿಯ ಸ್ಥಳಕ್ಕೆ ಪ್ರಾವಾಸಿಗರು ಬರುತ್ತಿರುವುದು ಸಂತಸದ ಸಂಗತಿಯಾಗಿದೆ. ಆದ್ದರಿಂದ ಈ ಕೆರೆಯ ಸ್ವಚ್ಚತೆ ಹಾಗೂ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಬೇಕಿದೆ. ಹೀಗಾಗಿ ಸ್ಥಳಿಯ ಜನಪ್ರತಿನಿಧಿಗಳು, ಸಾರ್ವಜನಿಕರು, ಗ್ರಾಮ ಪಂಚಾಯತಿ ಸಿಬ್ಬಂದಿ ಸ್ವಚ್ಚತೆ ಹಾಗೂ ಭದ್ರತೆಯ ಜೊತೆಗೆ ಪ್ರಾಕೃತಿಕ ಸೌಂದರ್ಯ ಕಾಪಾಡಿಕೊಳ್ಳಲು ಪಣ ತೋಡಬೇಕಿದೆ ಎಂದರು.

ನಂತರದಲ್ಲಿ ಶಾಲಾ ಮಕ್ಕಳು ದೇಶಭಕ್ತಿ ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೇಶಾಭಿಮಾನ ವ್ಯಕ್ತಪಡಿಸಿದರು. ಈ ವೇಳೆ ಹಣಕೋಣ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರಂಜನಾ ಪವಾರ, ಉಪಾಧ್ಯಕ್ಷರಾದ ಶ್ರದ್ಧಾ ನಾಯ್ಕ್, ತಾಪಂ ವ್ಯವಸ್ಥಾಪಕರಾದ ಅನಿತಾ ಎನ್. ಬಂಡಿಕಟ್ಟೆ, ನರೇಗಾ ಸಹಾಯಕ ನಿರ್ದೇಶಕರಾದ ರಾಮದಾಸ್ ನಾಯ್ಕ್, ಗ್ರಾಮ ಪಂಚಾಯತಿ ಸದ್ಯರು, ಗ್ರಾಪಂ ಅಭಿವೃದ್ಧಿ ಅಧಿಕಾರಿ ಬಸಪ್ಪ ತೇಗನಾಳ, ತಾಲೂಕಾ ಐಇಸಿ ಸಂಯೋಜಕರಾದ ಫಕ್ಕೀರಪ್ಪ ತುಮ್ಮಣ್ಣನವರ ಸೇರಿದಂತೆ ತಾಲೂಕು ಹಾಗೂ ಗ್ರಾಮ ಪಂಚಾಯತಿಯ ಎಲ್ಲ ಸಿಬ್ಬಂದಿ ಉಪಸ್ಥಿತರಿದ್ದರು.

See also  ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು