News Kannada
Thursday, March 30 2023

ಉತ್ತರಕನ್ನಡ

ಕಾರವಾರ: ನಾಡ ಬಂದೂಕು ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

Karwar: Man arrested for manufacturing and selling country-made pistols
Photo Credit : By Author

ಕಾರವಾರ: ಅಕ್ರಮವಾಗಿ ತನ್ನ ಮನೆಯಲ್ಲಿ ನಾಡ ಬಂದೂಕನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿರುವ ಘಟನೆ ತಾಲೂಕಿನ ಗೋಪಶಿಟ್ಟ, ಬರ್ನಾವಾಡ ಗ್ರಾಮದಲ್ಲಿ ನಡೆದಿದೆ.

ಬರ್ನಾವಾಡ ಗ್ರಾಮದ ಸಂಜು ವಿನಾಯಕ ಆಚಾರಿ ಬಂಧಿತ ಆರೋಪಿಯಾಗಿದ್ದಾನೆ. ಖಚಿತ ಮಾಹಿತಿ ಪಡೆದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ ಅವರ ನಿರ್ದೇಶನದಲ್ಲಿ ಅಡಿಶನಲ್ ಎಸ್‌ಪಿ ಬದರಿನಾಥ ಅವರ ಮಾರ್ಗದರ್ಶನದಲ್ಲಿ ರಚಿಸಲಾದ ವಿಶೇಷ ತಂಡವು ತಾಲೂಕಿನ ಗೋಪಶಿಟ್ಟ ಬರ್ನಾವಾಡದ ಆರೋಪಿಯ ಮನೆಯ ಮೇಲೆ ದಾಳಿ ನಡೆಸಿದೆ.

ಈ ವೇಳೆ ಮನೆಯ ಹಿಂದೆ ಇರುವ ತಗಡಿನ ಶೆಡ್ ನಲ್ಲಿ ಮಾರಾಟ  ಮಾಡುವ ಉದ್ದೇಶದಿಂದ ಒಂಟಿ ನಳಿಕೆಯ ನಾಡ ಬಂದೂಕನ್ನು ತಯಾರಿಸಿ ಇಟ್ಟಿದ್ದು ಅದನ್ನು ತಯಾರಿಸಲು ಬಳಸುವ ಸಾಮಗ್ರಿಗಳನ್ನು ವಶಪಡಿಸಿಕೊಂಡು ಆರೋಪಿತನನ್ನು ಬಂಧಿಸಿದ್ದಾರೆ. ಈ ಬಗ್ಗೆ ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ಶಸ್ತ್ರತ್ರ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಜಿಲ್ಲಾ ವಿಶೇಷ ವಿಭಾಗದ ಪಿ.ಎಸ್.ಐ. ಪ್ರೇಮನಗೌಡ ಪಾಟೀಲ್, ಚಿತ್ತಾಕುಲ ಪಿ.ಎಸ್.ಐ. ವಿಶ್ವನಾಥ ನಿಂಗೊಳ್ಳಿ, ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಾದ ರಾಘವೇಂದ್ರ ಜಿ, ಗುರುರಾಜ ನಾಯ್ಕ, ಭಗವಾನ ಗಾಂವಕರ, ಸಂತೋಷ ಕೆ. ಬಿ. ಪಾಲ್ಗೊಂಡಿದ್ದರು. ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಎಸ್.ಪಿ. ಅವರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ.

See also  ಅಮರಾವತಿ: ಮಂಕಿಪಾಕ್ಸ್ ರೋಗಲಕ್ಷಣಗಳೊಂದಿಗೆ ಆಂಧ್ರದಲ್ಲಿ ಎಂಟು ವರ್ಷದ ಮಗು ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು