News Kannada
Sunday, March 26 2023

ಉತ್ತರಕನ್ನಡ

ಗೋಕರ್ಣ: ವಿಷ್ಣುಗುಪ್ತ ವಿವಿಯಲ್ಲಿ ಅಹಿಚ್ಛತ್ರ ಕ್ಯಾಂಪಸ್ ಶೀಘ್ರದಲ್ಲಿ ಆರಂಭ- ರಾಘವೇಶ್ವರ ಶ್ರೀ

Gokarna: Ahichhatra campus at Vishnugupta University to be set up soon- Raghaveshvara Sri
Photo Credit : By Author

ಗೋಕರ್ಣ: ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಅಹಿಚ್ಛತ್ರ ಕ್ಯಾಂಪಸ್ ನಿರ್ಮಾಣ ಕಾರ್ಯ ಶೀಘ್ರ ಆರಂಭವಾಗಲಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿ ಪ್ರಕಟಿಸಿದರು.

ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ನಡೆದ ಗುರುಕುಲ ಚಾತುರ್ಮಾಸ್ಯ ಸೀಮೋಲ್ಲಂಘನ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ನಮ್ಮ ಸಮಾಜದ ನಡೆ- ನುಡಿ, ಆಹಾರ- ವಿಹಾರ, ಸಂಸ್ಕøತಿ- ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಈ ವಿಶಿಷ್ಟ ಕ್ಯಾಂಪಸ್ ಇಡೀ ದೇಶಕ್ಕೆ ಆದರ್ಶವಾಗಲಿದೆ. ಈ ಅಹಿಚ್ಛತ್ರ ಮುಂದೊಂದು ದಿನ ವಿಶ್ವದ ಬೆಳಕಾಗಲಿದೆ ಎಂದು ನುಡಿದರು.

ಇಡೀ ಜಗತ್ತು ಶ್ರೀಪೀಠ ಹಾಗೂ ಶಿಷ್ಯವರ್ಗವನ್ನು ಈ ಮಹತ್ಕಾರ್ಯದ ಮೂಲಕ ನೆನಪಿಸಿಕೊಳ್ಳುವಂತಾಗಬೇಕು. ಇದಕ್ಕೆ ಶಿಷ್ಯ ಸಮುದಾಯ ಶಕ್ತಿಮೀರಿ ಶ್ರಮಿಸಬೇಕು. ಶಿವಾಜಿ ಧರ್ಮಸಾಮ್ರಾಜ್ಯ ಸ್ಥಾಪನೆಗೆ ಮಾವಳೆಗಳು ಬೆನ್ನೆಲುಬಾಗಿ ನಿಂತಂತೆ ಶ್ರೀಮಠದ ಶಿಷ್ಯಭಕ್ತರು ಈ ಕಾರ್ಯಕ್ಕೆ ಸಂಕಲ್ಪ ತೊಡಬೇಕು ಎಂದು ಸೂಚಿಸಿದರು. ಈ ಅಹಿಚ್ಛತ್ರವೆಂಬ ವಿಶಿಷ್ಟ ಕ್ಯಾಂಪಸ್ ಇಡೀ ಸಮಾಜದ ಬದುಕನ್ನು ಚಿನ್ನ ಹಾಗೂ ಚೆನ್ನವಾಗಿಸುವ ಜತೆಗೆ ಛಿನ್ನ ಛಿನ್ನವಾಗಿರುವ ಸಮಾಜವನ್ನು, ದೇಶವನ್ನು ಒಂದುಗೂಡಿಸಬೇಕು ಎಂದು ಆಶಿಸಿದರು.

ಇದಕ್ಕೆ ಪೂರಕವಾಗಿ ಸಮಾಜದ ಅನುಕೂಲಸ್ಥ ದೊಡ್ಡ ಕುಟುಂಬಗಳು ಒಗ್ಗಟ್ಟಿನಿಂದ ವಿಶ್ವವಿದ್ಯಾಪೀಠ ನಿರ್ಮಾಣದ ಮಹತ್ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ವಿದ್ಯಾಭಿಕ್ಷೆ ಎಂಬ ಸೇವೆಯನ್ನು ಈ ಚಾತುರ್ಮಾಸ್ಯದಿಂದ ಆರಂಭಿಸಲಾಗುತ್ತಿದೆ ಎಂದು ಸ್ವಾಮೀಜಿ ಪ್ರಕಟಿಸಿದರು.

ಈ ಮಣ್ಣಿನ ಗುಣ ಅಪಾಯ. ಗೋಕರ್ಣದ ಮಣ್ಣಿನ ಮಹಿಮೆ ಆತ್ಮಲಿಂಗವನ್ನು ಕರೆಸಿಕೊಂಡಿದೆ. ಆದಿಗುರು ಶಂಕರರನ್ನು ಮೂರು ಬಾರಿ ಕರೆಸಿಕೊಂಡಿದೆ. ಶಿವನ ಆತ್ಮಲಿಂಗವನ್ನೇ ಧಾರಣೆ ಮಾಡುವ ಶಕ್ತಿ ಇರುವ ಮಣ್ಣಿನಲ್ಲಿ ಭಗೀರಥ ಒಂದು ಅಂಗುಷ್ಠದ ಮೇಲೆ ನಿಂತು ಗಂಗೆಗಾಗಿ ತಪಸ್ಸು ಮಾಡಿದ ಭೂಮಿ ಗೋಕರ್ಣ ಎಂಬ ಉಲ್ಲೇಖ ಪುರಾಣದಲ್ಲಿದೆ ಎಂದು ಬಣ್ಣಿಸಿದರು.

ಗಿರಿಕಾನನಗಳ ಭೂಮಿಯಲ್ಲಿ ಇಂದು ಬ್ರಹ್ಮಸೃಷ್ಟಿಯಿಂದ ವಿನೂತನ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಇಲ್ಲಿ ಆವೀರ್ಭವಿಸಿದೆ. ಇದರ ಶ್ರೇಯಸ್ಸು ಕ್ಷೇತ್ರಾಧಿಪತಿ ಮಲ್ಲಿಕಾರ್ಜುನನಿಗೆ, ಇಲ್ಲಿನ ಮಣ್ಣಿಗೆ ಸಲ್ಲುತ್ತದೆ. ಇದು ಮಿಂಚಿ ಮರೆಯಾಗುವ ಪವಾಡ ಅಲ್ಲ; ಶಾಶ್ವತವಾಗಿ ನೆಲೆ ನಿಲ್ಲುವ ಪವಾಡ ಎಂದರು.

ಅರುವತ್ತು ದಿನಗಳ ಅಮೃತ ಮಳೆ ಸುರಿದು ನಿಂತಂತೆ ಚಾತುರ್ಮಾಸ್ಯ ಸಂಪನ್ನಗೊಳ್ಳುತ್ತಿದೆ. ಮುಂದೇನು ಎಂಬ ಪ್ರಶ್ನೆ ಶಿಷ್ಯರನ್ನು ಕಾಡುತ್ತಿದೆ. ಆದರೆ ಈ ಕಾರ್ಯ ಮುಗಿದರೂ, ಇದರ ಪರಿಣಾಮ ಶಾಶ್ವತ. ದಿವ್ಯತೆ ನಮ್ಮೊಳಗೆ ಸಂಚರಿಸಿದೆ. ರಾಮದೇವರ ಮುದ್ರೆಯೊಂದು ಭಕ್ತರ ಹೃದಯದ ಮೇಲೆ ಬಿದ್ದಿದೆ. ಮಠವೇ ಪುನರ್ನವವಾಗುತ್ತಿದೆ. ಎಲ್ಲರ ಸೇವೆಗಳು ನಿತ್ಯಶಾಶ್ವತ ಎಂದು ವಿವರಿಸಿದರು.

ನಿಷ್ಠೆ, ಪ್ರಾಮಾಣಿಕತೆ, ನಿರಂತರ ಅನುಸರಣೆಗೆ ಅನ್ವರ್ಥವಾಗಿರುವ ಕೆ.ಜಿ.ಭಟ್ ಅವರು ಇಡೀ ಯುವ ಪೀಳಿಗೆಗೆ ಮಾದರಿ ಎಂದು ಪ್ರಶಸ್ತಿ ಪುರಸ್ಕøತರನ್ನು ಶ್ಲಾಘಿಸಿದರು. ನಮ್ಮ ಯಾವುದೇ ಅಂಗಸಂಸ್ಥೆ ಮಾಡುವ ಖರ್ಚಿನ ಪ್ರತಿಶತ 5ನ್ನು ಶ್ರೀರಾಮನಿಗೆ ಕಪ್ಪವಾಗಿ ಸಲ್ಲಿಸುವ ಯೋಜನೆ ಈ ಸಂದರ್ಭದಲ್ಲಿ ಚಾಲನೆ ಪಡೆಯಿತು. ಅದು ಸುರಕ್ಷಾ ನಿಧಿಯಾಗಿ ಶ್ರೀಮಠದಲ್ಲಿ ಇರಲಿದೆ ಎಂದು ಸ್ವಾಮೀಜಿ ನುಡಿದರು. ದುಂದುವೆಚ್ಚಕ್ಕೆ ಕಡಿವಾಣ ಹಾಕಿ ರಾಮದೇವರಿಗೆ ಕಪ್ಪವಾಗಿ ಸಲ್ಲಿಸುವ ಈ ನಿಧಿ ಮುಂದಿನ ದಿನಗಳಲ್ಲಿ ಅಕ್ಷಯ ನಿಧಿಯಾಗಿ ರೂಪುಗೊಳ್ಳಲಿದೆ ಎಂದರು.

See also  ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,940 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢ

ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಮಾತನಾಡಿ, ಜ್ಞಾನವಂತ, ಗುಣವಂತ, ಸಂಸ್ಕಾರವಂತ ಯುವಕ- ಯುವತಿಯರು ದೇಶದ ಆಸ್ತಿ. ಆದರೆ ಇಂದಿನ ಯುವ ಜನಾಂಗದಲ್ಲಿ ಸಂಸ್ಕಾರ- ಸಂಸ್ಕøತಿಯ ಕೊರತೆ ಎದ್ದುಕಾಣುತ್ತಿದ್ದು, ಈ ಕೊರತೆಯನ್ನು ನೀಗಿಸುವಲ್ಲಿ ಶ್ರೀಗಳು ಕೈಗೊಂಡಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಮಹತ್ವದ ಹೆಜ್ಜೆ ಎಂದು ಅಭಿಪ್ರಾಯಪಟ್ಟರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ನಿವೃತ್ತ ಪೊಲೀಸ್ ಅಧಿಕಾರಿ ಕೆ.ಜಿ.ಭಟ್, “ಈ ಪ್ರಶಸ್ತಿಯ ಕೀರ್ತಿ, ಶ್ರೀಮಠದ ಸಂಕಷ್ಟದ ಸಂದರ್ಭದಲ್ಲಿ ಹೆಬ್ಬಂಡೆಯಾಗಿ ನಿಂತ ಶಿಷ್ಯಕೋಟಿಗೆ ಸಲ್ಲುತ್ತದೆ. ಈ ಚಾತುರ್ಮಾಸ್ಯ ಪ್ರಶಸ್ತಿ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕಕ್ಕಿಂತ ಶ್ರೇಷ್ಠವಾದದ್ದು” ಎಂದು ಬಣ್ಣಿಸಿದರು.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮಹಿಳಾ ಸಂಚಾಲಕಿ ಶುಭಮಂಗಲ ಮಾತನಾಡಿ, ದೇಶದಲ್ಲಿ ಮಹಿಳೆ, ಕುಟುಂಬ ಸುರಕ್ಷಿತವಾಗಿದ್ದರೆ, ಇಡೀ ಸಮಾಜ, ದೇಶ ಸುರಕ್ಷಿತವಾಗಿರುತ್ತದೆ. ಇಂದಿನ ಸೈಬರ್ ಯುಗದಲ್ಲಿ ಮಹಿಳೆಯರಿಗೆ ದೊಡ್ಡ ಅಪಾಯ ಇದ್ದು, ಈ ಬಗ್ಗೆ ಮಹಿಳೆಯರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದರು.

ಸ್ವಾಗತ ಸಮಿತಿ ಅಧ್ಯಕ್ಷ ದಿನಕರ ಶೆಟ್ಟಿ ಮಾತನಾಡಿ, ಶ್ರೀಗಳ ಕರ್ತೃತ್ವ ಶಕ್ತಿಯಿಂದ ಕ್ಷೇತ್ರ ಪಾವನವಾಗಿದೆ. ಗೋಸ್ವರ್ಗ, ವಿವಿವಯಂಥ ಶ್ರೇಷ್ಠ ಕಾರ್ಯಗಳು ಇಡೀ ಕ್ಷೇತ್ರಕ್ಕೆ ಭೂಷಣ ಎಂದು ಹೇಳಿದರು.

ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಕುಮಟಾ- ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮಹಿಳಾ ಸಂಚಾಲಕಿ ಶುಭಮಂಗಳ, ಸಿಗಂಧೂರು ಕ್ಷೇತ್ರದ ಅರ್ಚಕ ಶೇಷಗಿರಿ ಭಟ್, ಹವ್ಯಕ ಮಹಾಮಂಡಲ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ ವೇದಿಕೆಯಲ್ಲಿದ್ದರು. ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪು ಅವಲೋಕನ ನಡೆಸಿದರು. ಚಾತುರ್ಮಾಸ್ಯ ಸಮಿತಿ ಕಾರ್ಯಾಧ್ಯಕ್ಷ ಪರಮೇಶ್ವರ ಮಾರ್ಕಾಂಡೆ ಸಭಾಪೂಜೆ ನೆರವೇರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು