News Kannada
Friday, September 29 2023
ಉತ್ತರಕನ್ನಡ

ಉತ್ತರಕನ್ನಡ: ಜಿಲ್ಲೆಯಲ್ಲಿ ರೆಬಿಸ್ ತಡೆಯಲು ಕ್ರಮ

Uttara Kannada: Steps taken to prevent rabies in the district
Photo Credit : By Author

ಕಾರವಾರ: ಜಿಲ್ಲೆಯಲ್ಲಿ ರೆಬಿಸ್ ತಡೆಯಲು ಗ್ರಾಮೀಣ ಪ್ರದೇಶಗಳಿಗೆ ಹೋಗಿ ಶಾಲಾ ಮಕ್ಕಳಿಗೆ ಇದರ ಬಗ್ಗೆ ಅರಿವು ಮೂಡಿಸಬೇಕು ಹಾಗೂ ಪ್ರಕರಣಗಳು ಕಂಡುಬಂದಲ್ಲಿ ಆರೋಗ್ಯಾಧಿಕಾರಿಗಳು ಸೂಕ್ಷ್ಮ ಕ್ರಮಕೈಗೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವಿರ್ ಅವರು ಅಧಿಕಾರಿಗಳಿಗೆ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ರೆಬಿಸ್ ಕಾಯಿಲೆಯ ಕುರಿತು ಅಂತರ್ ರಾಜ್ಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರವಾರ ಜಿಲ್ಲಾ ಸರ್ವೇಕ್ಷಣಾಧಿಕಾರಿ ಅರ್ಚನಾ ನಾಯಕ ಮಾತನಾಡಿ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ ೬೫೩೩ ನಾಯಿ ಜೊತೆಗೆ ಇತರೆ ಪ್ರಾಣಿಗಳಿಂದ ೩೪೯ ಕಚ್ಚಿದ ಪ್ರಕರಣಗಳು ದಾಖಲಾಗಿದೆ. ಯಾವುದೇ ರೀತಿಯ ರೆಬಿಸ್ ಕೇಸ್‌ಗಳು ಕಂಡುಬಂದಿಲ್ಲ. ಜೊತೆಗೆ ಯಾವುದೇ ಪ್ರಾಣಿಗಳು ಕಚ್ಚಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು, ರೆಬಿಸ್ ಮಾರಣಾಂತಿಕವಾದರೂ ಭಯಪಡುವಂತಹ ರೋಗವೇನಲ್ಲ ಇದಕ್ಕೆ ಕೂಡಲೇ ಚಿಕಿತ್ಸೆ ಪಡೆದರೆ ತಡೆಗಟ್ಟಬಹುದು ಎಂದು ಹೇಳಿದರು.

ಮಿಷನ್ ರೆಬಿಸ್ ಅಡಿಯಲ್ಲಿ ಈಗಾಗಲೇ ಕಾರವಾರ ತಾಲೂಕಿನ ೬೮ ಶಾಲೆಗಳಿಗೆ ಬೇಟಿ ನೀಡಿ ಇದರ ಬಗ್ಗೆ ಮಕ್ಕಳಲಿ ಜಾಗೃತಿ ಮೂಡಿಸಲಾಗಿದ್ದು ಇನ್ನುಳಿದ ಶಾಲೆಗಳಿಗೂ ಭೇಟಿ ನೀಡಿ ಈ ಕುರಿತು ಜಾಗೃತಿ ಮೂಡಿಸುವ ಸಮಾಜಮುಖಿ ಕೆಲಸ ಮಾಡಲು ಬಯಸುವ ಶಿಕ್ಷಕರನ್ನು ನೇಮಿಸಿಕೊಳ್ಳಿ ಜೊತೆಗೆ ಸರಿಯಾದ ಯೋಜನೆ ರೂಪಿಸಿ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶರದ್ ನಾಯಕ್, ಡಾ.ಲಲಿತ ಶೆಟ್ಟಿ, ಕಾರವಾರ ಡಿಎಲ್‌ಒ ಶಂಕರ್‌ರಾವ್, ಕಾರವಾರ ಡಿ.ಡಿ.ಪಿ.ಐ ಈಶ್ವರ ನಾಯ್ಕ ಹಾಗೂ ಇನ್ನಿತರ ಅಧಿಕಾರಿ ಮತ್ತು ಸಿಬ್ಬಂದಿಗಳು ಇದ್ದರು.

See also  ಕಾರವಾರ: ಕ್ರೀಡಾಪಟು ನಿವೇದಿತಾ ಪ್ರಶಾಂತ ಸಾವಂತ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು