News Kannada
Monday, October 02 2023
ಉತ್ತರಕನ್ನಡ

ಕಾರವಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ

Karwar: Women and Child Development Department to hold district level coordination committee meeting
Photo Credit : By Author

ಕಾರವಾರ: ಸ್ವಾಧಾರ ಕೇಂದ್ರಕ್ಕೆ ಬರುವಂತಹ ನೊಂದ ಮಹಿಳೆಗೆ ಕೇಂದ್ರದಲ್ಲಿ ದೊರುಕುವಂಥ ಸೌಲಭ್ಯಗಳು ಹಾಗೂ ಕೌಟುಂಬಿಕ ಕಾಯ್ದೆಯಡಿಯಲ್ಲಿ ಬರುವಂತಹ ಮಹಿಳೆಯರಿಗೆ ಖಾಸಗಿ ವಕೀಲರನ್ನು ನೇಮಿಸಿಕೊಳ್ಳುಲು ಆಗದೆ ಇರುವಂತ ಸಂದರ್ಭದಲ್ಲಿ ಕಾನೂನು ಪ್ರಾಧಿಕಾರದಿಂದ ಸಿಗುವಂತಹ ಸೌಲಭ್ಯಗಳು ಕುರಿತು ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಸಭಾಭವನದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮತನಾಡಿದ ಅವರು ಕೌಟುಂಬಿಕ ದೌರ್ಜನ್ಯ ಹಾಗೂ ಇನ್ನಾವುದೆ ಕಿರುಕುಳದಿಂದ ನೊಂದು ಬಂದAತಹ ಮಹಿಳೆಯರಿಗೆ ಸಾಂತ್ವಾನ ನೀಡುವುದಷ್ಟೆ ಅಲ್ಲದೆ ಸಾಮಾಜಿಕವಾಗಿ ಅವರಿಗಿರುವಂತಹ ಹಕ್ಕುಗಳ ಬಗ್ಗೆ ಮಾಹಿತಿ ನೀಡಬೇಕು.

ಸಿಡಿಪಿಓ ಅಧಿಕಾರಿಗಳು ಖಾಯಂ ವೇಳಾಪಟ್ಟಿ ನಿಗದಿ ಪಡಿಸಿ ಆಯಾ ತಾಲೂಕುಗಳಿಗೆ ವಾರಕ್ಕೊಮ್ಮೆ ಭೇಟಿ ನೀಡಿ ನೋಂದ ಮಹಿಳೆಯರೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಹೇಳಿದರು. ಸಮಾಜದಲ್ಲಿ ಯಾವುದೇ ಆಧಾರವಿಲ್ಲದೆ ಹಾಗೂ ನಿರ್ಗತಿಕ ಮಹಿಳೆಯರ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದರೆ ಕೂಡಲೇ ಸ್ವಾಧಾರ ಕೇಂದ್ರಕ್ಕೆ ಸಂಪರ್ಕಿಸಬೇಕು ಎಂದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅನೈತಿಕ ಸಾಗಾಟದ ಬಗ್ಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮೇಲ್ವಿಚಾರಕಿಯರು, ಹಾಗೂ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಗ್ರಾಮ ಪಂಚಾಯತ್ ಹಾಗೂ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಸಾಗಣಿಕೆ ತಡೆಯುವ ಜಾಗೃತಿ ಮತ್ತು ಮಾನವ ಕಳ್ಳ ಸಾಗಣಿಕೆ ತಡೆ ದಿನಾಚರಣೆ ಅಂಗವಾಗಿ ಜಿಲ್ಲೆಯ ವಿವಿಧ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕಾರವಾರ ಸರಕಾರಿ ಪದವಿ ಪೂರ್ವಕಾಲೆಜಿನಲ್ಲಿ ಮಾನವ ಕಳ್ಳ ಸಾಗಣಿಕೆ ಪತಿಜ್ಞಾ ವಿಧಿ ಹಾಗೂ ಜಗೃತಿ ಕಾರ್ಯಕ್ರವನ್ನು ಹಮ್ಮಿಕೊಂಡು ವರದಿ ನೀಡಿದರು. ಬಾಣಂತಿಯರಿಗೆ ಹಾಗೂ ಗರ್ಭಿಣಿಯರಿಗೆ ನೀಡಲಾಗುತ್ತಿರುವ ಮಾತೃಪೂರ್ಣ ಯೋಜನೆಯೂ ಜಿಲ್ಲೆಯಲ್ಲಿ ಮನೆಗಳು ಅಂಗನವಾಡಿ ಕೇಂದ್ರಗಳಿಂದ ದೂರ ಇರುವುದರಿಂದ ಹಾಗೂ ಗುಡ್ಡಗಾಡು ಪ್ರದೇಶ ಕೂಡಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ನಿರಾಕರಿಸುತ್ತಿರುವುದರಿಂದ ಸರ್ಕಾರದ ಆದೇಶದಂತೆ ಫಲಾನುಭವಿಗಳ ಮನೆಗೆ ತಲುಪಿಸುವಂತಾಗಬೇಕು ಮತ್ತು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿಯಲ್ಲಿ ಗರ್ಭಿಣಿ, ಬಾಣಂತಿಯರಿಗೆ ತಲಾ ೫೦೦೦ ಸಾವಿರದಂತೆ ಮೂರು ಕಂತುಗಳಲ್ಲಿ ವರ್ಗಾವಣೆ ಮಾಡಲಾಗುತ್ತಿದ್ದು, ಈ ಮೂರು ಹಂತದಲ್ಲಿ ಅರ್ಜಿ ಸಲ್ಲಿಸುವುದಕಿಂತ ಒಂದೆ ಸಲ ಅರ್ಜಿ ಸಲ್ಲಿಸುವ ರೀತಿ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ದುರಸ್ಥಿಯಲ್ಲಿರುವಂಥ ಅಂಗನವಾಡಿ ಕೇಂದ್ರಗಳು, ಸ್ಥಳ ಹಾಗೂ ಬೇಕಾಗುವಂತಹ ವಸ್ತುಗಳ ಕುರಿತು ಪಟ್ಟಿ ಮಾಡಿ ನೀಡಬೇಕು ಎಂದು ಹೇಳಿದರು. ಸಭೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ, ಕಾನೂನು ಸೇವಾ ಪ್ರಾಧಿಕಾರಿ ಅಧಿಕಾರಿ ರೇಣುಕಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಶ್ಯಾಮಲಾ ಸಿ.ಕೆ, ಸಿ.ಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಶರದ್ ನಾಯಕ್, ಪಿ.ಒ ಅಧಿಕಾರಿಗಳು, ಸ್ವಾಧಾರ ಗೃಹ ಅಧಿಕಾರಿಗಳು ಹಾಗೂ ಇನ್ನಿತರರು ಇದ್ದರು.

See also  ಪೊಲೀಸರು, ಗೃಹ ಸಚಿವ ಎಲ್ಲರಿಗೂ ಸರಿ‌ ಇರಲು ಸಾಧ್ಯ ಇಲ್ಲ; ಅರಗ ಜ್ಞಾನೇಂದ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು