News Kannada
Monday, October 02 2023
ಉತ್ತರಕನ್ನಡ

ಕಾರವಾರ: ಕ್ರಿಮ್ಸ್ ನೂತನ ಆಸ್ಪತ್ರೆ ನಿರ್ಮಾಣಕ್ಕೆ ಸಚಿವರಿಂದ ಶಂಕುಸ್ಥಾಪನೆ ಹೇಳಿಕೆ ಹಾಸ್ಯಾಸ್ಪದ

KARWARA 1
Photo Credit : By Author

ಕಾರವಾರ: ಕೆಳ ಅಂತಸ್ತು ನಿರ್ಮಾಣಗೊಂಡು, ಮೊದಲನೇ ಮಹಡಿಯ ಕಾಮಗಾರಿ ಪ್ರಗತಿಯಲ್ಲಿರುವ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕ್ರಿಮ್ಸ್) ಆವರಣದಲ್ಲಿ 450 ಹಾಸಿಗೆಗಳ ನೂತನ ಆಸ್ಪತ್ರೆಗೆ ಅ.11ರಂದು ಆರೋಗ್ಯ ಸಚಿವರು ಶಂಕುಸ್ಥಾಪನೆಗೆ ಬರುತ್ತಾರೆಂದು ಶಾಸಕರು ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ತಾಲೂಕು ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಾಧವ ನಾಯಕ ಹೇಳಿದ್ದಾರೆ.

2019ರ ನ.6ಕ್ಕೆ ಆಡಳಿತಾತ್ಮಕ ಅನುಮೋದನೆಗೊಂಡ ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯು ಅಧಿಕೃತವಾಗಿ 2021ರ ಏಪ್ರಿಲ್ 21ರಂದು ಆರಂಭವಾಗಬೇಕಿತ್ತಾದರೂ, ಕೆಲವು ಕಾರಣಗಳಿಂದಾಗಿ ಮೂರ್ನಾಲ್ಕು ತಿಂಗಳು ತಡವಾಗಿ ಕಾಮಗಾರಿ ಆರಂಭಿಸಲಾಗಿದೆ. ಬೆಂಗಳೂರಿನ ಬಿಎಸ್ಆರ್ ಇನ್ಫ್ರಾಟೆಕ್ ಪ್ರೈ.ಲಿ. ಕಂಪನಿ ಈ ನಿರ್ಮಾಣ ಕಾಮಗಾರಿಯ ಗುತ್ತಿಗೆ ಪಡೆದು ಕೆಲಸ ಪ್ರಗತಿಯಲ್ಲಿದೆ. ಈಗಾಗಲೇ ಕೆಳ ಅಂತಸ್ತು ನಿರ್ಮಾಣಗೊಂಡಿದೆ. ಮೊದಲನೇ ಮಹಡಿಯ ಕಾಮಗಾರಿ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಹೀಗಿರುವಾಗ, ಪತ್ರಿಕಾ ಪ್ರಕಟಣೆ ನೀಡಿ, ಕಾರವಾರದ ಮೆಡಿಕಲ್ ಕಾಲೇಜಿನಲ್ಲಿ ವಿವಿಧ ಉನ್ನತ ಸೌಲಭ್ಯ ಕಲ್ಪಿಸುವುದು, 450 ಬೆಡ್ ಗಳ ಆಸ್ಪತ್ರೆಗೆ ಶಿಲಾನ್ಯಾಸ ಹಾಗೂ ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಳ ಪರಿಶೀಲನೆಗೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ ಅ.11ರಂದು ಕಾರವಾರಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಸಾಮಾನ್ಯವಾಗಿ ಭೂಮಿ ಪೂಜೆಯನ್ನು ಮಾಡುವುದು ನಿರ್ಮಾಣ ಕಾಮಗಾರಿ ನಿರ್ವಿಘ್ನವಾಗಿ ನಡೆಯಲಿ ಎಂದು ಭೂಮಿತಾಯಿಯಲ್ಲಿ ಪ್ರಾರ್ಥಿಸಿಕೊಳ್ಳಲು. ಆದರೆ, ಭೂಮಿಯ ಮೇಲೆ ಈಗಾಗಲೇ ಎದ್ದು ನಿಂತಿರುವ ಕಟ್ಟಡಕ್ಕೆ ಮತ್ತೆ ಭೂಮಿ ಪೂಜೆ ಮಾಡಲು ಸಚಿವರು ರಾಜಧಾನಿಯಿಂದ ಕಾರವಾರಕ್ಕೆ ಬರುತ್ತಾರೆಂದರೆ ಇದರ ಹಿಂದಿನ ಅರ್ಥವೇನು? ಎಂದು ಪ್ರಶ್ನಿಸಿರುವ ಅವರು, ಕಂಪನಿಯವರು ಕಾಮಗಾರಿ ಸ್ಥಳದಲ್ಲಿ ಅಳವಡಿಸಿರುವ ಬೋರ್ಡ್ ನಲ್ಲಿ ಉಲ್ಲೇಖಿಸಿರುವಂತೆ ಕಾಮಗಾರಿಯ ಅವಧಿ ಈ ತಿಂಗಳ 20ಕ್ಕೆ ಕೊನೆಗೊಳ್ಳಲಿದೆ. ಹೀಗಿರುವಾಗ ಅವಧಿ ಮುಗಿಯುವ 10 ದಿನಗಳ ಮುಂಚೆ ಬಂದು ಶಂಕುಸ್ಥಾಪನೆ ಮಾಡುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ಈ ಹಿಂದೆ ಕೂಡ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕಾರವಾರಕ್ಕೆ ಬಂದು ಕಾಮಗಾರಿಯ ಶಂಕುಸ್ಥಾಪನೆ ಮಾಡಲಿದ್ದಾರೆ. ಅವರ ಬಳಿಕ ಬಂದ ಹಾಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಕೂಡ ಬರುತ್ತಾರೆಂದು ಹೇಳಿದರು. ಈಗ ಆರೋಗ್ಯ ಸಚಿವರ ಸರದಿ. ಇವರಿಗೆ ಭೂಮಿ ಪೂಜೆಯೇ ಪ್ರತಿಷ್ಠೆಯಾದಂತಿದ್ದು, ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿರುವ ಕಟ್ಟಡಕ್ಕೆ ಮತ್ತೆ ಭೂಮಿ ಪೂಜೆ ಏಕೆ ಎನ್ನುವುದನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸಬೇಕು ಎಂದು ಮಾಧವ ನಾಯಕ ಒತ್ತಾಯಿಸಿದ್ದಾರೆ.

See also  ಪೊಲೀಸ್ ನೌಕರಿ ಕೊಡಿಸುವುದಾಗಿ ವಂಚನೆ ಆರೋಪಿಗಾಗಿ ಪೊಲೀಸರಿಂದ ಹುಡುಕಾಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು