News Kannada
Wednesday, October 04 2023
ಉತ್ತರಕನ್ನಡ

ಕಾರವಾರ: ಸೇಂಟ್ ಮೈಕಲ್ ಶಾಲೆಯಲ್ಲಿ ಚೆಸ್ ಪಂದ್ಯಾವಳಿಗೆ ಚಾಲನೆ

Karwar: Chess tournament to be held at St. Michael's School
Photo Credit : By Author

ಕಾರವಾರ: ಕ್ರೀಡೆಯಲ್ಲಿ ಸೋಲು ಗೆಲವು ಸಹಜ, ಆದರೆ ಸ್ಪರ್ಧಾಳುಗಳು ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ ಕರೆ ನೀಡಿದರು.ನಗರದ ಸೇಂಟ್ ಮೈಕಲ್ ಪ್ರೌಢಶಾಲೆಯಲ್ಲಿ ಗುರುವಾರದಿಂದ ಪ್ರಾರಂಭವಾದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದು ಕಾರವಾರದಲ್ಲಿ ಸ್ಪರ್ಧಿಸುತ್ತಿರುವುದು ಹೆಮ್ಮೆಯ ವಿಷಯ. ಹಳೆ ವಿದ್ಯಾರ್ಥಿಯಾಗಿ ಈ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡುರುವುದು ಸಂತಸ ಸಂತಿದೆ. ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಮಕ್ಕಳು ಸ್ಪರ್ಧಿಸಬೇಕು ಎಂದರು. ಉತ್ತರ ಕನ್ನಡ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಎಂ ಮಾತನಾಡಿ, ಹೊರಾಂಗಣ ಕ್ರೀಡೆಗಳು ದೈಹಿಕವಾಗಿ ಸದೃಢ ಮಾಡಿದರೆ, ಒಳಾಂಗಣ ಕ್ರೀಡೆಗಳು ಮನಸಿಕವಾಗಿ ನಮ್ಮನ್ನು ಸದೃಢ ಮಾಡುತ್ತವೆ. ಚದುರಂಗ, ಕೇರಂ ನಂತಹ ಆಟದಲ್ಲಿ ಏಕಾಗ್ರತೆ ಅತ್ಯಂತ ಮುಖ್ಯವಾಗುತ್ತದೆ ಎಂದರು. ನಗರಸಭೆ ಅಧ್ಯಕ್ಷ ಡಾ.ನಿತಿನ ಪಿಕಳೆ, ಕಾರವರ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಈಶ್ವರ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತೇಶ ನಾಯಕ, ಶಿಕ್ಷಣ ಇಲಾಖೆ ಅಧಿಕಾರಿಗಳಾದ ಲತಾ ನಾಯಕ, ಪ್ರವೀಣ ತಳೇಕರ, ಸಮಾಜ ಸೇವಕ ನರೇಂದ್ರ ದೇಸಾಯಿ, ಶಿಕ್ಷಕರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಇದ್ದರು.

See also  ಕಾರವಾರ: ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು