News Kannada
Saturday, June 03 2023
ಉತ್ತರಕನ್ನಡ

ಕಾರವಾರ: ರಾಜ್ಯದಲ್ಲಿ ಜ್ಞಾನ ದರ್ಶನ ಕಾರ್ಯಕ್ರಮ ಯಶಸ್ವಿ- ಕೋಟ ಶ್ರೀನಿವಾಸ ಪೂಜಾರಿ

Karwar: Jnana Darshan programme successful in Karnataka
Photo Credit : By Author

ಕಾರವಾರ: ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಪೈಲೆಟ್ ಆಧಾರದ ಮೇಲೆ ಜ್ಞಾನ ದರ್ಶನ ಕಾರ್ಯಕ್ರಮ ಆಯೋಜಿಸಿ ಪ್ರತಿಭಾನ್ವಿತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 50 ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಷ್ಠಿತ ಐಐಟಿ, ಐಐಎಂ ಮುಂತಾದ ಉನ್ನತ ಸಂಸ್ಥೆಗಳಿಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ಫರೇಡ್ ಮೈದಾನದಲ್ಲಿ ಗುರುವಾರ 74ನೇ ಗಣರಾಜ್ಯೋತ್ಸವದ ನಿಮಿತ್ತ ರಾಷ್ಟç ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ರಾಜ್ಯದಲ್ಲಿಯೇ ಉತ್ತರ ಕನ್ನಡ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ರೂಪಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ವ್ಯವಸ್ಥಿತವಾಗಿ ಅನುಷ್ಟಾನಗೊಳಿಸಲಾಗುತ್ತಿದೆ ಎಂದು ವಿವಿಧತೆಯಲ್ಲಿ ಏಕತೆಯನ್ನು ಸಾರುವ ಏಕೈಕ ರಾಷ್ಟç ನಮ್ಮ ಭಾರತ. ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಸದೃಢ ರಾಷ್ಟçವಾಗಿ ಭಾರತ ಬೆಳೆದು ನಿಂತಿದೆ.

ಭವ್ಯ ಭಾರತವನ್ನು ಅಖಂಡ ಶಕ್ತಿಶಾಲಿ ರಾಷ್ಟçವನ್ನಾಗಿ ರೂಪಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂಬುದನ್ನು ನಾವು ಹೆಮ್ಮೆಯಿಂದ ಹೇಳಬಹುದು. ಸಂವಿಧಾನದ ಆಶಯದ ಭದ್ರ ಬುನಾದಿಯ ಮೇಲೆ ನಾಡ ಕಟ್ಟುವ ಕೆಲಸ ನಮ್ಮ ಸರ್ಕಾರ ಮುಂದುವರೆಸಿದೆ ಎಂದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ನಮ್ಮ ಸರ್ಕಾರ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಂಬಿಕೆಯಿರಿಸಿದ್ದು, ಆರೋಗ್ಯ, ಕೃಷಿ, ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿದೆ. ಸಮಾಜದ ಕೊನೆಯ ವ್ಯಕ್ತಿಯೂ ಬದುಕಿನಲ್ಲಿ ಭದ್ರತೆಯ ಭಾವ ಕಾಣಬೇಕು ಎಂಬ ಆಶಯದಿಂದ ನಮ್ಮ ಸರ್ಕಾರ ದೂರದೃಷ್ಟಿಯ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದೆ.

ಸರ್ವರಿಗೂ ಗುಣಮಟ್ಟದ ಆರೋಗ್ಯ ಸೌಲಭ್ಯ ಒದಗಿಸುವ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ, ಸಾಮಾಜಿಕ ಭದ್ರತಾ ಯೋಜನೆಗಳಡಿ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಮಾತೃಪೂರ್ಣ ಯೋಜನೆ, ವಿಧವೆಯರ ಹಾಗೂ ಅಂಗವಿಕಲರ ಮಾಸಾಶನ ಮೊತ್ತವನ್ನು ಹೆಚ್ಚಿಸಿದ್ದು, ಹಿರಿಯ ನಾಗರಿಕರು, ವಿಕಲಚೇತನರಲ್ಲಿ ಹೊಸ ಚೈತನ್ಯ ತುಂಬುವ ಪ್ರಯತ್ನ ಮಾಡಿದ್ದೇವೆ, ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳ ಅಭಿವೃದ್ಧಿಪಡಿಸುವುದು. ರಸ್ತೆ ಸಂಪರ್ಕ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದರು.

See also  ಕಾರವಾರ:  235 ಕುಟುಂಬಗಳಿಗೆ ಅಧಿಕೃತ ಹಕ್ಕುಪತ್ರ ವಿತರಣಾ ಕಾರ್ಯಕ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು