News Kannada
Sunday, October 01 2023
ಉತ್ತರಕನ್ನಡ

ಕಾರವಾರ: ಅಭಿವೃದ್ಧಿ ಪರ ಬಜೆಟ್‌, ಎಲ್ಲಾ ಕ್ಷೇತ್ರಗಳಿಗೆ ಆದ್ಯತೆ – ಶಿವರಾಮ ಹೆಬ್ಬಾರ್ ಪ್ರತಿಕ್ರಿಯೆ

Pro-development budget, priority for all sectors
Photo Credit : By Author

ಕಾರವಾರ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಮಂಡಿಸಿದ 2023-24 ನೇ ಸಾಲಿನ ಬಜೆಟ್‌ ಅಭಿವೃದ್ಧಿಪರವಾಗಿದ್ದು, ಎಲ್ಲಾ ಕ್ಷೇತ್ರಗಳಿಗೆ ಸಮಾನ ಆದ್ಯತೆ ನೀಡಲಾಗಿದೆ. ಶ್ರೀ ಸಾಮಾನ್ಯನಿಂದ ಹಿಡಿದು ಎಲ್ಲಾ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಮಂಡಿಸಿರುವ ಬಜೆಟ್‌ ಇದಾಗಿದೆ ಎಂದು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಜೆಟ್‌ನಲ್ಲಿ ಕೃಷಿ, ಮೀನುಗಾರಿಕೆ, ಕಾರ್ಮಿಕರಿಗೆ ಕೈಗಾರಿಕೆ, ತಂತ್ರಜ್ಞಾನ , ಆರೋಗ್ಯ, ಶಿಕ್ಷಣ ಹೀಗೆ ಹತ್ತು ಹಲವು ಕ್ಷೇತ್ರಗಳಿಗೆ ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಆದಾಯ ತೆರಿಗೆ ಮಿತಿಯನ್ನು 7 ಲಕ್ಷಕ್ಕೆ ಏರಿಸುವ ಕ್ರಾಂತಿಕಾರಕ ಘೋಷಣೆ ಮಾಡಲಾಗಿದೆ. ಇದು ಮಧ್ಯಮ ವರ್ಗದವರಿಗೆ ಸಾಕಷ್ಟು ಅನುಕೂಲವಾಗಲಿದೆ.

ಡಿಜಿಟಲ್‌ ಶಿಕ್ಷಣಕ್ಕೆ ವೇಗ ನೀಡುವ ಯೋಜನೆಗಳನ್ನು ಘೋಷಣೆ ಮಾಡಲಾಗಿದ್ದು, ಇದು ಮುಂಬರುವ ಸ್ಪರ್ಧಾತ್ಮಕ ದಿನಗಳಿಗೆ ನಮ್ಮ ಮಕ್ಕಳನ್ನು ತಯಾರು ಮಾಡಲು ಅನುಕೂಲವಾಗಲಿದೆ. ಸಣ್ಣ ಉದ್ದಿಮೆ ಸಹಾಯವಾಗುವ ಯೋಜನೆಯನ್ನು ಘೋಷಣೆ ಮಾಡಲಾಗಿದ್ದು, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದೆ. ಮಹಿಳೆಯರು ಹಾಗೂ ಶ್ರಮಿಕರನ್ನು ಗಮನದಲ್ಲಿಟ್ಟುಕೊಂಡು ನಿರ್ಮಲಾ ಸೀತಾರಾಮನ್‌ ಅವರು ಹೊಸ ಕ್ರಮಗಳನ್ನು ಪ್ರಕಟಿಸಿದ್ದಾರೆ. ಒಟ್ಟಾರೆ ಇದೊಂದು ಸರ್ವಸ್ಪರ್ಶಿ ಸರ್ವವ್ಯಾಪಿ ಮುಂಗಡಪತ್ರವಾಗಿದ್ದು, ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ. ಬಡವರು ಹಾಗೂ ಮಧ್ಯಮವರ್ಗದವರಿಗೆ ಸಮಾನ ಕೊಡುಗೆ ನೀಡಿದೆ.

ಮುಂದಿನ ಹಲವಾರು ವರ್ಷಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮಂಡಿಸಿದ ಬಜೆಟ್‌ ಇದಾಗಿದೆ. ಭದ್ರಾ ಮೇಲ್ಡಂಡೆಗೆ ಯೋಜನೆಗೆ 5300 ಕೋಟಿ ನೀಡುವ ಮೂಲಕ ರಾಜ್ಯಕ್ಕೂ ಕೊಡುಗೆ ನೀಡಲಾಗಿದೆ. ಇದೊಂದು ಅಭೂತಪೂರ್ವ ಕೊಡುಗೆಯಾಗಿದ್ದು, ಲಕ್ಷಾಂತರ ರೈತರಿಗೆ ಸಹಾಯವಾಗಲಿದೆ ಎಂದರು.

See also  ಶಿರಸಿ: ಸುಂಡಳ್ಳಿ ಅರಣ್ಯ ಪ್ರದೇಶದಲ್ಲಿ ಕರಡಿ ದಾಳಿಗೆ ರೈತ ಬಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು