News Kannada
Wednesday, March 29 2023

ಉತ್ತರಕನ್ನಡ

ಗೋಕರ್ಣ: ರಾಮಾಯಣದಿಂದ ಪುರುಷಾರ್ಥದ ಪ್ರಾಪ್ತಿ- ರಾಘವೇಶ್ವರ ಶ್ರೀ

Purushartha from Ramayana - Raghaveswara Sri
Photo Credit : By Author

ಗೋಕರ್ಣ: ಎಲ್ಲ ಜೀವಿಗಳೂ ಬಯಸುವುದು ಸುಖವನ್ನು. ಆದರೆ ಸುಖವನ್ನು ಬಯಸುವುದು ಮಾತ್ರ ನಮ್ಮ ಕೈಯಲ್ಲಿದೆ. ಬಯಸಿದುದನ್ನು ಪಡೆಯುವುದು ನಮ್ಮ ಕೈಮೀರಿದೆ. ರಾಮಾಯಣವು ಇರುವ ಸುಖವನ್ನಲ್ಲದೆ, ಇಲ್ಲದ, ಕೈಮೀರಿದ ಸುಖವನ್ನೂ ಕರುಣಿಸುವಂಥದ್ದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು.

ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಶ್ರೀಗಳೇ ಧರ್ಮಭಾರತೀ ಪತ್ರಿಕೆಯಲ್ಲಿ ಬರೆದಿರುವ  ಭಾವ ರಾಮಾಯಣವನ್ನು ರಾಮಾರ್ಪಣಗೊಳಿಸಿ ಆಶೀರ್ವಚನ ನೀಡಿದರು.

ರಾಮಾಯಣವನ್ನು ಓದುವಾಗಲೇ ಶಬ್ದಗಳಲ್ಲಿ ಹೇಳಲಾರದ ಸುಖದ ಅನುಭವವಾಗುತ್ತದೆ. ರಾಮಾಯಣವು ತೋರಿದ ಹಾದಿಯಲ್ಲಿ ನಡೆದಾಗ ಜೀವನದಲ್ಲಿ ಅನ್ಯಾನ್ಯ ಸುಖಗಳು ಒದಗಿ ಬರುತ್ತವೆ. ರಾಮಾಯಣದ ಅವಲೋಕನವು ಪುಣ್ಯವನ್ನು ತಂದುಕೊಡುತ್ತದೆ.  ಹೀಗೆ ರಾಮಾಯಣದ ಅನುಸಂಧಾನದಿಂದ ಮೂರು ಬಗೆಯ ಸುಖಗಳ ಪ್ರಾಪ್ತಿಯಾಗುತ್ತದೆ ಎಂದರು.

ರಾಮಾಯಣದ ಓದಿನಿಂದ ಜೀವಿಯು ಬಯಸುವ ಧರ್ಮ, ಅರ್ಥ, ಕಾಮ, ಮೋಕ್ಷಗಳೆಂಬ ಪುರುಷಾರ್ಥಗಳು ಲಭಿಸುತ್ತವೆ. ನಾಲ್ಕು ಪುರುಷಾರ್ಥಗಳನ್ನು ಹೊರತುಪಡಿಸಿ ಜೀವಿ ಏನನ್ನೂ ಬಯಸುವುದಿಲ್ಲ. ಏನನ್ನೇ ಬಯಸಿದರೂ ಅದು ಪುರುಷಾರ್ಥಗಳಲ್ಲೇ ಬರುತ್ತದೆ. ಹಾಗಾಗಿ ರಾಮಾಯಣದಿಂದ ಪುರುಷಾರ್ಥ ಸಿದ್ಧಿಸುತ್ತದೆ ಎಂದು ಬಣ್ಣಿಸಿದರು.

ಇಂದು ಜಗತ್ತು ಹಣದ ಹಿಂದೆ ಓಡುತ್ತಿದೆ. ರಾಮಾಯಣವನ್ನು ಪಠಿಸಿದರೆ ಸಂಪತ್ತೇ ನಮ್ಮೆಡೆಗೆ ಹರಿದು ಬರುತ್ತದೆ ಎಂದು ವಿಶ್ಲೇಷಿಸಿದರು.

ಧರ್ಮಭಾರತೀ ಸಂಪಾದಕ ಕೃಷ್ಣಾನಂದ ಶರ್ಮಾ ಪ್ರಸ್ತಾವಿಕವಾಗಿ ಮಾತನಾಡಿದರು. ಧರ್ಮಭಾರತೀಪತ್ರಿಕೆ ರಾಮಾರ್ಪಣಗೊಳಿಸಿದ ಶ್ರೀಗಳು ನಂತರ ಪತ್ರಿಕೆಯನ್ನು ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿದ್ಯಾರ್ಥಿಗಳಿಗೆ ಮತ್ತು ಶಿಷ್ಯಭಕ್ತರಿಗೆ ಅನುಗ್ರಹಿಸಿ, ರಾಮಾಯಣ ಆಧರಿತ ಪಾಠ ಮಾಡಿದರು.

ವಿಶ್ವವಿದ್ಯಾಪೀಠದ ಲೋಕಸಂಪರ್ಕಾಧಿಕಾರಿ ಅಶ್ವಿನೀ ಉಡುಚೆ ಭಾವರಾಮಾಯಣದ ಮಹತ್ತ್ವವನ್ನು ವಿವರಿಸಿದರು. ಮಹಾಮಂಡಲದ ಅಧ್ಯಕ್ಷ ಆರ್, ಎಸ್ ಹೆಗಡೆ ಹರಗಿ, ಮಠದ ಪ್ರಶಾಸನಾಧಿಕಾರಿ ಸಂತೋಷ ಹೆಗಡೆ, ಶ್ರೀಭಾರತೀಪ್ರಕಾಶನದ ಅಧ್ಯಕ್ಷ ಸಚಿನ್, ಉಪಸಂಪಾದಕ ಗಣೇಶ ಕೃಷ್ಣ ಹೆಗಡೆ, ಪ್ರಸರಣ ಮಾರ್ಗದರ್ಶಕ ಮಹೇಶ ಚಟ್ನಳ್ಳಿ ಮತ್ತಿತರರು ಉಪಸ್ಥಿತರಿದ್ದರು.

See also  ಕಾರವಾರ: ಘೋಟ್ನೇಬಾಗ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ, ಓರ್ವ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು