News Kannada
Tuesday, March 21 2023

ಉತ್ತರಕನ್ನಡ

ಕಾರವಾರ: ಸರಕಾರಿ ನೌಕರರ ಸಮಸ್ಯೆ ಪರಿಹಾರಕ್ಕೆ ಕ್ರಮ – ಕೋಟ ಶ್ರೀನಿವಾಸ ಪೂಜಾರಿ

Srinivas Poojary visited the hospital and conducted a blood pressure test.
Photo Credit : By Author

ಕಾರವಾರ: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘದವರು ಮಾರ್ಚ್ 1ರಂದು ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಸಮಸ್ಯೆಯನ್ನು ಪರಿಹಾರ ಮಾಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಂದವಾಳದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರಿ ನೌಕರರು ಪ್ರತಿಭಟನೆ ನಡೆಸುವುದರಿಂದ ಸಹಜವಾಗಿಯೇ ಸಮಸ್ಯೆಗಳು ಸೃಷ್ಟಿಯಾಗಲಿವೆ. ಅದೆಲ್ಲವನ್ನು ನಿಭಾಯಿಸಿಕೊಂಡು ಸಮಸ್ಯೆ ಪರಿಹಾರ ಮಾಡುತ್ತೇವೆ ಎಂದರು.

ಕುಮಟಾದ ಹೃದಯ ಭಾಗದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುತ್ತಿದ್ದೇವೆ. ಈ ವಿಷಯದ ಬಗ್ಗೆ ಖಚಿತತೆ ಇರಲಿ ಎನ್ನುವ ಕಾರಣಕ್ಕೆ ಬಜೆಟ್ನಲ್ಲಿ ಘೋಷಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸಿ ಆಸ್ಪತ್ರೆ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಿದ್ದಾರೆ ಎಂದು ಪೂಜಾರಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸೋದೆ ಸದಾಶಿವರ ರಾಯರು ಪ್ರಥಮ ಬಾರಿಗೆ ಬ್ರಿಟಿಷ ಧ್ವಜವನ್ನು ಕೆಳಗಿಳಿಸಿದ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಶಾಸಕಿ ರೂಪಾಲಿ ನಾಯ್ಕ ಮತ್ತು ಸಂಸದ ಅನಂತಕುಮಾರ ಹೆಗಡೆ ಈ ಸಂದರ್ಭಕ್ಕೆ ಹೊಸ ಆಯಾಮ ಕೊಡುವ ಮೂಲಕ ಬಹಳ ಅರ್ಥಪೂರ್ಣವಾಗಿ ಈ ದಿನವನ್ನು ಆಚರಿಸಲಾಗುತ್ತಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

See also  ಮಂಗಳೂರು: ಗುಂಡಿಗಳ ದುರಸ್ತಿ ಮಾಡುವಂತೆ ಆಗ್ರಹಿಸಿ ಯುವಕನೋರ್ವನ ಏಕಾಂಗಿ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು