News Kannada
Tuesday, March 21 2023

ಉತ್ತರಕನ್ನಡ

ಕಾರವಾರ:  ಸಿಎಂ ಕಾರು ಅಡ್ಡಗಟ್ಟಿ ಕಾಂಗ್ರೆಸ್ ಪ್ರತಿಭಟನೆ

Karwar: Congress blocks CM's car, stages protest
Photo Credit : News Kannada

ಕಾರವಾರ: ಪಕ್ಷಾತೀತವಾಗಿ ನಡೆಸಬೇಕಾದ ಕದಂಬೋತ್ಸವವನ್ನು ಬಿಜೆಪಿ ಪಕ್ಷದ ಉತ್ಸವವನ್ನಾಗಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಆಗಮಿಸುತ್ತಿದ್ದ ರಸ್ತೆಯಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಪರಿಣಾಮ ಕೆಲ ನಿಮಿಷ ಸಿಎಂ ಸಂಚಾರಕ್ಕೆ ಅಡ್ಡಿಯಾದ ಘಟನೆ ಬನವಾಸಿಯಲ್ಲಿ ನಡೆದಿದೆ.

ಬನವಾಸಿಯಲ್ಲಿ ಆಯೋಜಿಸಲಾಗಿರುವ ಕದಂಬೋತ್ಸವ ಹಾಗೂ ಕೆರೆ ತುಂಬಿಸುವ ಯೋಜನೆ ಉದ್ಘಾಟನೆಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದ ವೇಳೆ ಅದೇ ಮಾರ್ಗದ ರಸ್ತೆಯಲ್ಲಿಯೇ ವಿಎಸ್ ಪಾಟೀಲ್ ನೇತೃತ್ವದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಕದಂಬೋತ್ಸವವನ್ನು ಬಿಜೆಪಿ ಪಕ್ಷದ ಉತ್ಸವವನ್ನಾಗಿ ಮಾಡಲಾಗುತ್ತಿದೆ. ಕೇವಲ ಪಕ್ಷದ ಕಾರ್ಯಕರ್ತರನ್ನು ಆಹ್ವಾನಿಸಿ ಮಾಡಲಾಗುತ್ತಿದೆ. ಸಚಿವರು ಬಿಜೆಪಿ ಚಿಹ್ನೆಯಿರುವ ಟೀ ಸರ್ಟ್ ಹಂಚಿ ಪಕ್ಷದ ಉತ್ಸವ ಮಾಡುತ್ತಿದ್ದಾರೆ. ಕೆರೆ ತುಂಬಿಸುವ ಯೋಜನೆಗೆ ಈ ಹಿಂದೆ ಸಿದ್ದರಾಮಯ್ಯ ಅವರು ಅನುದಾನ ಒದಗಿಸಿದ್ದರು. ಆದರೆ ಇದೀಗ ಕರೆಂಟ್ ಹಾಗೂ ನೀರಿಲ್ಲದೆ ಇದ್ದರೂ ಏತನೀರಾವರಿ ಯೋಜನೆ‌‌ ಉದ್ಘಾಟನೆ ಮಾಡಲಾಗುತ್ತಿದೆ. ಯೋಜನೆಯನ್ನು ಸಿಎಂ ಉದ್ಘಾಟನೆ ಮಾಡಿ ಅದರ ಕ್ರೆಡಿಟ್ ಪಡೆಯಲು ಶಿವರಾಮ್ ಹೆಬ್ಬಾರ್ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

See also  ಕಾರವಾರ: ಪರೇಶ ಮೇಸ್ತ ಸಾವಿನ ಸತ್ಯಾಂಶವನ್ನು ರಾಜಕೀಯಕ್ಕೆ ಬಳಿಕೆ ಮಾಡಿದ ಬಿಜೆಪಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು