News Kannada
Thursday, March 23 2023

ಉತ್ತರಕನ್ನಡ

ಕಾರವಾರ: ಲೈಟ್‌ಫಿಶಿಂಗ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

Karwar: Massive protest demanding light fishing shutdown
Photo Credit : By Author

ಕಾರವಾರ: ಜಿಲ್ಲೆಯಲ್ಲಿ ಸಮುದ್ರ ವ್ಯಾಪ್ತಿಯಲ್ಲಿ ಬೆಳಕು ಮೀನುಗಾರಿಕೆಯನ್ನು ಬಂದ್ ಮಾಡುವಂತೆ ಆಗ್ರಹಿಸಿ ಜಿಲ್ಲೆಯ ಕರಾವಳಿಯ ಮೀನುಗಾರರ ಹಿತರಕ್ಷಣಾ ಸಂಘವು ನಗರ ಜಿಲ್ಲಾಧಿಕಾರಿ ಕಚೇರಿ ಬಳಿ ಬೃಹತ್ ಪ್ರತಿಭಟನೆ ಗುರುವಾರ ನಡೆಸಿದರು. ಆರಂಭದಲ್ಲಿ ನಗರದಲ್ಲಿ ಕರಾವಳಿಯ ವಿವಿಧ ತಾಲೂಕಿನಿಂದ ಆಗಮಿಸಿದ ಸಾವಿರಾರು ಮೀನುಗಾರರು ಬೃಹತ್ ಮೆರವಣಿಗೆ ನಡೆಸಿ ಸರಕಾರ, ಜಿಲ್ಲಾಡಳಿತ, ಮೀನುಗಾರಿಕೆ ಇಲಾಖೆಯ ವಿರುದ್ಧ ಘೋಷಣೆಗಳನ್ನು ಹಾಕಿದರು.

ಬಳಿಕ ಎಲ್ಲ ಮೀನುಗಾರರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿ ತಮ್ಮ ಆಕ್ರೋಶ ವ್ಯಕ್ತಪಪಡಿಸಿದರು. ಬೆಳಕು ಮೀನುಗಾರಿಕೆ ಮತ್ತು ಬುಲ್ ಟ್ರಾಲರ್ ನಿಷೇಧವಿದ್ದಾಗಲೂ ಕಾನೂನು ಉಲ್ಲಂಘಿಸುವ ಬೋಟ್ ಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಹಾಗೂ ಮಾಲೀಕರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಒತ್ತಾಯಸಿದರು.

ಮೀನುಗಾರಿಕೆ ಭವಿಷ್ಯದ ದೃಷ್ಟಿಯಿಂದ ರಾಜ್ಯ ಮತ್ತು ಕೇಂದ್ರ ಸರಕಾರವೂ ಅವೈಜ್ಞಾನಿಕ ಮೀನುಗಾರಿಕೆಯನ್ನು ನಿಷೇಧ ಮಾಡಿದ್ದರೂ ಸಹ ಯಾವುದೇ ಪ್ರಯೋಜನವಾಗುತ್ತಿಲ್ಲ. ಈ ಬಗ್ಗೆ ಮೀನುಗಾರಿಕೆ ಇಲಾಖೆ, ಕರಾವಳಿ ಕಾವಲು ಪಡೆಯ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕುಮಟಾದ ಮೀನುಗಾರ ಪ್ರಮುಖರಾದ ನಾಗರಾಜ್ ಹರಿಕಂತ್ರ ಅವರು ಬೆಳಕು ಮೀನುಗಾರಿಕೆ ನಡೆಸುವವರನ್ನು ಸ್ಥಳೀಯ ಮೀನುಗಾರರು ತಮ್ಮ ಜೀವ ಹಂಗು ಬಿಟ್ಟು ಹಿಡಿದು ತಂದು ಇಲಾಖೆಗೆ ಒಪ್ಪಿಸಿದರೂ ದಂಡ ಹಾಕಿ ಬಿಡುತ್ತಿದ್ದಾರೆ. ಇದರಿಂದ ಬೆಳಕು ಮೀನುಗಾರಿಕೆ ನಡೆಸುವವರಿಗೆ ಯಾವುದೇ ನಷ್ಟವಾಗುತ್ತಿಲ್ಲ. ಬೆಳಕು ಮೀನುಗಾರಿಕೆ ನಡೆಸಿ ಕೋಟ್ಯಾಂತರ ರೂ. ಮೀನುಗಳನ್ನು  ಸಮುದ್ರದಲ್ಲಿ ಹಿಡಿಯುತ್ತಿದ್ದಾರೆ. ಇದರಿಂದ ಸಮುದ್ರದಲ್ಲಿ ಮತ್ಸ್ಯಕ್ಷಾಮ ಭವಿಷ್ಯದಲ್ಲಿ ಸೃಷ್ಟಿಯಾಗಲಿದೆ.

ಈ ಬಗ್ಗೆ ಸರಕಾರದ ಆದೇಶವಿದ್ದರೂ ಸಹ ಅಧಿಕಾರಿಗಳು ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಬಳಿಕ ಮನವಿ ಸ್ವೀಕರಿಸಲು ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದರೂ ಸಹ ಮೀನುಗಾರರು ಮನವಿ ನೀಡದೆ, ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಳಕು ಮೀನುಗಾರಿಕೆ ನಿಷೇಧ ಇದ್ದರೂ ಸಹ ಅಧಿಕಾರಿಗಳು ಕ್ರಮಕೈಗೊಳ್ಳದೆ ಇರುವುದರ ಬಗ್ಗೆ ಆಕ್ಷೇಪಿಸಿದರು. ಬಳಿಕ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸುವಂತೆ ಒತ್ತಾಯಿಸಿದರು.

See also  ಕಾರವಾರ: ಸುರಂಗ ಮಾರ್ಗದ ಮೂಲಕ ಸಂಚಾರ ಆರಂಭಿಸುವಂತೆ ಮನವಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು