News Kannada
Friday, June 09 2023
ಉತ್ತರಕನ್ನಡ

ಕಾರವಾರ: ಮೂಲಸೌಕರ್ಯ ಒದಗಿಸಲು ಒತ್ತಾಯಿಸಿ ರಸ್ತೆ ಗುಂಡಿಗಳಲ್ಲಿ ಗಿಡ ನೆಟ್ಟು ಪ್ರತಿಭಟನೆ

Karwar: Protest by planting saplings in potholes demanding providing infrastructure
Photo Credit : News Kannada

ಕಾರವಾರ: ಭಟ್ಕಳದ ಜಂಬರ್ ಮಠಕ್ಕೆ ಸಾಗುವ ಮಾರ್ಗದ ವಾರ್ಡ್ ನಂಬರ್ 10 ಮತ್ತು 11ರ ರಸ್ತೆ ಸೇರಿದಂತೆ ಇತರೆ ಮೂಲಸೌಕರ್ಯಗಳನ್ನು ಪಡೆಯಲು ನಾಗರಿಕರು ಹರಸಾಹಸ ಪಡೆಬೇಕಾದಂತಹ ಪರಿಸ್ಥಿತಿ ಬಂದೊದಗಿದೆ. ಈ ಹಿನ್ನೆಲೆಯಲ್ಲಿ ರಸ್ತೆಯ ಮಧ್ಯ ಗಿಡ ನೆಟ್ಟು ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಇಲ್ಲಿನ ಸ್ಥಳಿಯ ಜನಪ್ರತಿನಿಧಿಗಳು ಹಾಗೂ ಇಲ್ಲಿನ ಸ್ಥಳೀಯ ನಿವಾಸಿಗಳು ಎಷ್ಟೇ ಬಾರಿ ಈ ಬಗ್ಗೆ ಮನವಿಯನ್ನು ನೀಡಿದರು ಪುರಸಭೆ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಹಲವಾರು ಬಾರಿ ಸಳೀಯಾಡಳಿತ ಹಾಗೂ ತಾಲೂಕಾಡಳಿತಕ್ಕೆ ಮನವಿ ಸಲ್ಲಿಸಲಾದರೂ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಈ ಬಗ್ಗೆ ಗಮನಹರಿಸದಿರುವುದು ಇಲ್ಲಿನ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದಾಗಿ ಈ ಅವ್ಯವಸ್ಥೆಯಿಂದ ಬೇಸತ್ತು ರಸ್ತೆಯಲ್ಲಿರುವ ಹೊಂಡಗಳಲ್ಲಿ ಗಿಡಗಳನ್ನು ನೆಟ್ಟು ಸಾಂಕೇತಿಕವಾಗಿ ಸ್ಥಳೀಯರು ಪ್ರತಿಭಟಿಸಿದರು.

ಈ ಬಗ್ಗೆ ಮಾತನಾಡಿದ ಸ್ಥಳಿಯ ಸಚಿನ್ ಮಹಾಲೆ, ಜನರು ನಿತ್ಯ ಸಂಚಾರಕ್ಕೆ ಅನೂಕೂಲ ಕಲ್ಪಿಸುವ ರಸ್ತೆಯು ಕಳೆದ 5- 6 ವರ್ಷಗಳಿಂದ ಹಾಳಾಗಿದೆ. ಈ ಬಗ್ಗೆ ನಗರೋತ್ಥಾನ ಯೋಜನೆಯಡಿ ಕಳೆದ 2 ತಿಂಗಳ ಹಿಂದೆ ಭೂಮಿ ಪೂಜೆ ನಡೆಸಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಕುಂದಾಪುರ ಮೂಲದ ಗುತ್ತಿಗೆದಾರು ಕಾಮಗಾರಿ ಟೆಂಡರ್ ಪಡೆದು ಕಾಮಗಾರಿ ಆರಂಭಿಸಲು ಮೀನಾಮೇಷ ಎಣಿಸುತ್ತಿದ್ದು, ಈ ಬಗ್ಗೆ ಪುರಸಭೆಗೆ ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಗುತ್ತಿಗೆದಾರನಿಗೆ ಈ ಬಗ್ಗೆ ಪುರಸಭೆ ನೋಟಿಸ್ ನೀಡಿದ್ದರು ಕಾಮಗಾರಿ ಆರಂಭಿಸಿಲ್ಲ.

ಸ್ಥಳೀಯರು ಗುತ್ತಿಗೆದಾರನನ್ನು ಫೋನ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದರೂ ಗುತ್ತಿಗೆದಾರನಿಂದ ಯಾವುದೇ ರೀತಿಯ ಸಮರ್ಪಕವಾದಂತಹ ಉತ್ತರ ದೊರೆಯದಾಗಿದೆ ಎಂದರು. ಈ ಕಳೆದ ಹಲವು ವರ್ಷಗಳಿಂದ ರಸ್ತೆ ಸಂಪೂರ್ಣ ಹಾಳಾಗಿದ್ದು, ಕಬ್ಬಿಣದ ಸರಳುಗಳು ರಸ್ತೆಯಲ್ಲಿ ಎದ್ದು ನಿಂತಿದೆ. ಇದರಿಂದ ವಾಹನ ಸವಾರರು ವಾಹನಗಳನ್ನು ಚಲಾಯಿಸುವುದು ಕಷ್ಟವಾಗಿದೆ. ಅಲ್ಲದೇ ನೀರಿನ ಬಾವಿಗಳು ಅವೈಜ್ಣಾನಿಕವಾಗಿ ನಿರ್ಮಾಣಗೊಂಡ ಯುಜಿಡಿ ಅಂಡರ್ ಗ್ರೌಂಡ್ ಡ್ರ‍್ಯಾನೇಜ್ ಕಾಮಗಾರಿಯಿಂದಾಗಿ ಈ ಭಾಗದ ಹಲವು ಮನೆಗಳು ನೀರಿನ ಸಮಸ್ಯೆಯನ್ನು ಎದರಿಸುತ್ತಿದ್ದಾರೆ.

ರಥೋತ್ಸವದ ಸಮಯದಲ್ಲಿ ದೇವರ ಪಲ್ಲಕ್ಕಿ ಉತ್ಸವವು ಈ ಮಾರ್ಗದಿಂದಲೇ ಸಂಚರಿಸುವುದಿದ್ದು, ಈ ಬಗ್ಗೆ ಪುರಸಭೆಯಾದರೂ ಗಮನಹರಿಸಿ ಶೀಘ್ರವಾಗಿ ಕಾಮಗಾರಿಯನ್ನು ನಡೆಸಿ ನಾಗರಿಕರಿಗೆ ಮೂಲಸೌಕರ್ಯಗಳನ್ನು ಆದಷ್ಟು ಶೀಘ್ರದಲ್ಲಿ ಒದಗಿಸಬೇಕೆಂದು ಆಗ್ರಹಿಸಿದರು. ಜಿಲ್ಲಾಧಿಕಾರಿಗಳವರೆಗೂ ಈ ಬಗ್ಗೆ ಮಾಹಿತಿ ಸಲ್ಲಿಸಲಾಗಿದ್ದರೂ ಸಹ ಇಲ್ಲಿಯ ತನಕ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ.

ಇಂದು ಸಾಂಕೇತಿಕವಾಗಿ ಹೋರಾಟ ಮಾಡಿದ್ದು, ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ನಡೆಸುವ ಬಗ್ಗೆ ಎಚ್ಚರಿಕೆಯನ್ನು ನೀಡಿದರು. ಈ ಸಂಧರ್ಭದಲ್ಲಿ ಸ್ಥಳೀಯರಾದ ವಿನಾಯಕ್ ಶೇಟ್, ಶ್ರೀಕಾಂತ ಮೋಗೇರ, ಅಮಿತ ಮಹಾಲೆ, ವಿಶ್ವನಾಥ ಶೇಟ್ ಸೇರಿದಂತೆ ನೂರಾರು ಮಂದಿ ಇದ್ದರು.

See also  ಮೊರ್ಬಿ: ಸೇತುವೆ ಕುಸಿತ, ಮೃತರ ಸಂಖ್ಯೆ 141ಕ್ಕೆ ಏರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು