News Kannada
Sunday, October 01 2023
ಸಾಂಡಲ್ ವುಡ್

ಶೀಘ್ರದಲ್ಲೇ ತೆರೆ ಕಾಣಲು ಸಿದ್ಧವಾದ “ಶ್ರೀಮಂತ”

"Rich" ready to hit the screens soon
Photo Credit : News Kannada

ಕಾರವಾರ: ಬಾಲಿವುಡ್ ನಟ ಸೋನು ಸೂದ್ ಮೊದಲ ಬಾರಿಗೆ ಕನ್ನಡದಲ್ಲಿ ನಟಿಸಿರುವ ‘ಶ್ರೀಮಂತ’ ಚಲನಚಿತ್ರ ಏಪ್ರಿಲ್ ಎರಡನೇ ವಾರದಲ್ಲಿ ಬಿಡುಗಡೆಗೆ ಸಿದ್ಧವಾಗಿದೆ ಸಹಾಯಕ ನಿರ್ದೇಶಕ ಶಿವರಾಜ್ ದಳವಾಯಿ ಹೇಳಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಮಾತನಾಡಿದ ಅವರು, ಹಾಸನ್ ರಮೇಶ್ ಕಥೆ- ಚಿತ್ರಕಥೆ- ಸಂಭಾಷಣೆ- ನಿರ್ದೇಶನದ, ಅವರದ್ದೇ ಗೋಲ್ಡನ್ ರೈನ್ ಮೂವೀಸ್ ಸಂಸ್ಥೆಯಡಿ ನಿರ್ಮಾಣಗೊಂಡಿರುವ ಮೊದಲ ಚಿತ್ರ ಇದಾಗಿದ್ದು, ನಾದಬ್ರಹ್ಮ ಡಾ.ಹಂಸಲೇಖರವರ ಎಂಟು ಹಾಡುಗಳನ್ನ ಒಳಗೊಂಡಿದೆ. ವಿಶೇಷವೆಂದರೆ, ದಿ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಹಾಡಿರುವ ಕೊನೆಯ ಗೀತೆ ಕೂಡ ಈ ಸಿನೇಮಾದಲ್ಲಿದೆ.

ರೈತನ ಕುರಿತಾದ ಈ ಸಿನೇಮಾದ ಚಿತ್ರೀಕರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಿತ್ರೀಕರಣಗೊಂಡಿದ್ದು, ಅನ್ನದಾತನ ನೋವು- ನಲಿವನ್ನು ಸಾರುವ ಚಿತ್ರ ಇದಾಗಿದೆ. ನಾಯಕಿಯಾಗಿ ಮುಂಬೈನ ಬೆಡಗಿ ವೈಷ್ಣವಿ ಪಟವರ್ಧನ್, ವೈಷ್ಣವಿ ಮೆನನ್ ಜೊತೆಗೆ ಕಲ್ಯಾಣ ಕರ್ನಾಟಕದ ಕ್ರಾಂತಿ ಎಂಬ ಯುವ ಪ್ರತಿಭೆ ಕೂಡ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಚರಣ್ ರಾಜ್, ಸಾಧು ಕೋಕಿಲ, ರಮೇಶ್ ಭಟ್, ರಾಜು ತಾಳಿಕೋಟೆ ಹೀಗೆ ದೊಡ್ಡ ದೊಡ್ಡ ಹಿರಿಯ ನಟರು ಚಿತ್ರದಲ್ಲಿದ್ದಾರೆ.

See also  ಕಾಜಲ್ – ರಾನಾ ಅಭಿನಯದ 'ನಾನ್ ಆನಯಿಟ್ಟಾಲ್' ಟ್ರೇಲರ್ ರಿಲೀಸ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು