ಕಾರವಾರ: ಶಿರಸಿ-ಕುಮಟಾ ರಸ್ತೆಯ ಬೆಣ್ಣೆಹೊಳೆ ಬಳಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗಾಗಲಿ ಕಾರಿನಲ್ಲಿದ್ದವರಿಗಾಗಲೀ ಯಾವುದೇ ಹಾನಿಯಾಗದೇ ಪಾರಾಗಿದ್ದಾರೆ. ಸಾರಿಗೆ ಸಂಸ್ಥೆಯ ಭಟ್ಕಳ-ಗೋಕಾಕ ಬಸ್ಸು ಮತ್ತು ಗುಜರಾತ್ ಮೂಲದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಶಿರಸಿ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.