News Kannada
Friday, June 09 2023
ಉತ್ತರಕನ್ನಡ

ರೂಪಾಲಿ ಎಸ್.ನಾಯ್ಕ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದವರು ಪ್ರಮಾಣ ಮಾಡಲಿ

Let those who spread fake news about Rupali S. Naik take an oath.
Photo Credit : By Author

ಕಾರವಾರ: ನಾಡವರ ಸಮಾಜದ ಮತಗಳು ತಮಗೆ ಬೇಡ ಎಂದು ರೂಪಾಲಿ ಎಸ್.ನಾಯ್ಕ ಹೇಳಿದ್ದಾರೆಂದು ಆ ರೀತಿ ಸುಳ್ಳು ಸುದ್ದಿ ಹಬ್ಬಿಸಿದವರು ಧರ್ಮಸ್ಥಳದ ಮಂಜುನಾಥನ ಎದುರು ಪ್ರಮಾಣ ಮಾಡಲಿ. ನಾಡವರ ಸಮಾಜದ ಮತಗಳು ತಮಗೆ ಬೇಡ ಎಂದು ರೂಪಾಲಿ ಎಸ್.ನಾಯ್ಕ ಅವರು ಹೇಳಿದ್ದಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಕಿಡಿಗೇಡಿಗಳು ಹರಿದುಬಿಡುತ್ತಿದ್ದಾರೆ.

ಹಾಗಿದ್ದರೆ ರೂಪಾಲಿ ಎಸ್.ನಾಯ್ಕ ಅವರು ಆ ರೀತಿ ಹೇಳಿದ್ದರ ವಿಡಿಯೋ ಆಗಲಿ, ಆಡಿಯೋ ಆಗಲಿ ಪ್ರದರ್ಶಿಸಲಿ. ರೂಪಾಲಿ ಎಸ್.ನಾಯ್ಕ ಅವರ ಮತಗಳನ್ನು ಕಸಿಯಲು ಇಂತಹ ಇಲ್ಲ ಸಲ್ಲದ, ರೂಪಾಲಿ ಎಸ್.ನಾಯ್ಕ ಎಲ್ಲೂ ಹೇಳಿರದ ಮಾತುಗಳನ್ನು ಸತ್ಯ ಸುದ್ದಿ ಎಂಬಂತೆ ಬಿಂಬಿಸಲಾಗುತ್ತಿದೆ. ಈ ಸುಳ್ಳು ಸುದ್ದಿ ಹಬ್ಬಿಸಿದವರು ಧರ್ಮಸ್ಥಳದ ಮಂಜುನಾಥಸ್ವಾಮಿಯ ಎದುರು ಪ್ರಮಾಣ ಮಾಡಲಿ. ರೂಪಾಲಿ ಎಸ್.ನಾಯ್ಕ ಅವರಿಗೆ ಎಲ್ಲ ಸಮಾಜದ ಬಗ್ಗೆ ಗೌರವ ಇದೆ. ಯಾವುದೇ ಸಮಾಜಕ್ಕೆ ಕಿಂಚಿತ್ತೂ ಧಕ್ಕೆ ಆಗದ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಚುನಾವಣೆಯಲ್ಲಿ ಗೆಲುವು, ಸೋಲು ಬೇರೆ ಮಾತು. ಆದರೆ ಅವರ ವ್ಯಕ್ತಿತ್ವಕ್ಕೆ ಮಸಿ ಬಳೆಯುವಂತಹ, ಒಂದು ಸಮಾಜದ ವಿರೋಧಿ ಎಂದು ಬಿಂಬಿಸುವ ಕಿಡಿಗೇಡಿಗಳು ಇದನ್ನು ಅರ್ಥಮಾಡಿಕೊಂಡು ಈ ಸವಾಲನ್ನು ಸ್ವೀಕರಿಸಬೇಕು.

ನಾಡವ ಸಮಾಜದ ಮುಖಂಡರು ಮನವಿ ಮಾಡಿದ ಹಿನ್ನೆಲೆಯಲ್ಲಿ ಕೊಗ್ರೆ ದೇವಾಲಯಕ್ಕೆ ಸರ್ಕಾರದಿಂದ 50 ಲಕ್ಷ ರೂ.ಗಳನ್ನು ರೂಪಾಲಿ ನಾಯ್ಕ ಅವರು ಮಂಜೂರಿ ಮಾಡಿಸಿರುವುದೂ ಗಮನಾರ್ಹವಾಗಿದೆ. ಇನ್ನು ರೂಪಾಲಿ ಎಸ್.ನಾಯ್ಕ ಅವರು ಕಾರವಾರ ಜನತೆಯ ಮತಗಳು ತಮಗೆ ಬೇಡ ಎಂದು ಹೇಳಿದ್ದಾರೆ ಎಂಬ ವದಂತಿಯನ್ನೂ ಕೆಲ ಕಿಡಿಗೇಡಿಗಳು ಹಬ್ಬಿಸಿದ್ದಾರೆ. ನೇರವಾಗಿ ಚುನಾವಣೆಯಲ್ಲಿ ಎದುರಿಸಲಾರದ ಕೆಲವರು ಇಂತಹ ವಿಕೃತ ಕುತಂತ್ರ ನಡೆಸಿದ್ದು ಅವರ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿ ಎಂದೂ ಹೇಳಬೇಕಾಗಿದೆ.

ಮುಂಬರುವ ದಿನಗಳಲ್ಲಿ ಇಂತಹ ವಿಕೃತ ಮನಸ್ಸಿನವರಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಕಾರವಾರ ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಷ ಗುನಗಿ, ನಗರ ಘಟಕದ ಅಧ್ಯಕ್ಷ ನಾಗೇಶ ಕುರ್ಡೇಕರ ಹಾಗೂ ಅಂಕೋಲಾ ಮಂಡಲ ಅಧ್ಯಕ್ಷ ಸಂಜಯ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

See also  ಬೆಂಗಳೂರು: ಹೋಟೆಲ್ ರಿಸೆಪ್ಷನಿಸ್ಟ್ ಜೊತೆ ಅನುಚಿತವಾಗಿ ವರ್ತಿಸಿದ ಪೊಲೀಸ್ ಅಧಿಕಾರಿ ಅಮಾನತು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

178
Srinivas Badkar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು