News Karnataka Kannada
Friday, March 29 2024
Cricket
ಉತ್ತರಕನ್ನಡ

ಪದ್ಮಶ್ರೀ ತುಳಸಿ ಗೌಡರಿಗೆ ಒಲಿದು ಬಂದ ಡಾಕ್ಟರೇಟ್: ಜೂನ್ 12 ರಂದು ಪದವಿ ಪ್ರದಾನ

Padma Shri Tulsi Gowda to be conferred with doctorate on June 12
Photo Credit : News Kannada

ಕಾರವಾರ: ಅಂಕೋಲಾ ತಾಲ್ಲೂಕಿನ ಹೆಮ್ಮೆಯ ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಅವರು ಮತ್ತೊಂದು ಗರಿಮೆಗೆ ಪಾತ್ರರಾಗಿದ್ದು ಧಾರವಾಡದ ಕೃಷಿ ವಿಶ್ವವಿದ್ಯಾಲಯದಿಂದ ನೀಡಲಾಗುವ ಗೌರವ ಡಾಕ್ಟರೇಟ್ ಪದವಿ ಒಲಿದು ಬಂದಿದೆ.

ಅಂಕೋಲಾದ ತಾಲೂಕಿನ ಉಳುವರೆ ಮೂಲದ ಹೊನ್ನಳ್ಳಿಯ ತುಳಸಿ ಗೌಡ ಅವರಿಗೆ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಶುಕ್ರವಾರ ಅಧಿಕೃತ ಘೋಷಣೆ ಹೊರಡಿಸಿ, ಆಹ್ವಾನ ನೀಡಲಾಗಿದೆ. ಕೃಷಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಕೃಷಿ ವಿಶ್ವವಿದ್ಯಾಲಯದ 36 ನೇ ಘಟಿಕೋತ್ಸವದ ಸಂದರ್ಭದಲ್ಲಿ ತುಳಸಿ ಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರೂ ಕೃಷಿ ವಿಶ್ವವಿದ್ಯಾಲಯದ ಕುಲಪತಿಗಳೂ ಆದ ಥಾವರಚಂದ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದಾರೆ.

ಜೂನ್ 12 ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನಾಭಿವೃದ್ದಿ ಕೇಂದ್ರದಲ್ಲಿ ನಡೆಯಲಿರುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ತುಳಸಿ ಗೌಡ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತದೆ.

ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತ ಸರ್ಕಾರದ ಕೃಷ ಸಂಶೋಧನಾ ಹಾಗೂ ಶಿಕ್ಷಣ ವಿಭಾಗದ ಮಹಾನಿರ್ದೇಶಕ ಡಾ. ಹಾಮಾಂಶು ಪಾಠಕ್, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಕುಲಪತಿ ಡಾ. ಪಿ. ಎಲ್. ಪಾಟೀಲ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲ ಸಚಿವರ ಕಾರ್ಯಾಲಯದಿಂದ ಪದ್ಮಶ್ರೀ ತುಳಸಿ ಗೌಡ ಅವರಿಗೆ ರವಾನಿಸಿರುವ ಆಹ್ವಾನ ಪತ್ರದಲ್ಲಿ ತಿಳಿಸಲಾಗಿದೆ. ತುಳಸಿ ಗೌಡ ಅವರಿಗೆ ಗೌರವ ಡಾಕ್ಟರೇಟ್ ಒಲಿದು ಬಂದಿರುವುದಕ್ಕೆ ತಾಲೂಕಿನ, ಜಿಲ್ಲೆಯ ಹಾಗೂ ನಾಡಿನ ಹಲವು ಗಣ್ಯರು ಸಂತಸ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು