News Karnataka Kannada
Thursday, April 25 2024
Cricket
ಉತ್ತರಕನ್ನಡ

ವಿದ್ಯಾರ್ಥಿಗಳಿಂದ ಸಾವಿರಾರು ರೂ. ವಸೂಲಿ ಮಾಡಿದ ಉಪನ್ಯಾಸಕ: ಗ್ರಾಮಸ್ಥರಿಂದ ದೂರು

Thousands of rupees from students. Lecturer collected: Villagers complain
Photo Credit : News Kannada

ಕಾರವಾರ: ಮುಂಡಗೋಡ ತಾಲೂಕಿನ ನ್ಯಾಸರ್ಗಿ ಐಟಿಐ ಕಾಲೇಜಿನ ಉಪನ್ಯಾಸಕರೋರ್ವರು ವಿದ್ಯಾರ್ಥಿಗಳಿಂದ ವಿವಿಧ ಕಾರಣಕ್ಕಾಗಿ ಹಣ ವಸೂಲಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಉಪನ್ಯಾಸಕ ರವಿ ಭಜಂತ್ರಿ ಎನ್ನುವವರು ವಿದ್ಯಾರ್ಥಿಗಳಿಂದ ಸಮವಸ್ತ್ರ ಹಾಗೂ ಪುಸ್ತಕಗಳನ್ನು ನೀಡುವುದಾಗಿ 3000ರೂ. ಹಣ ವಸೂಲಿ ಮಾಡಿದ್ದಾರೆ. ಶಿರಸಿಗೆ ಪರೀಕ್ಷೆ ಬರೆಯಲು ಹೋದ ವಿದ್ಯಾಥಿಗಳಿಂದ 500ರೂ. ಹಣ ಹಾಗೂ ವಿದ್ಯಾರ್ಥಿಗಳು ಗೈರಾಗಿದ್ದರೆ ಅಂಥಹ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಈ ಆಯುಕ್ತರಿಗೆ ದೂರು ಸಲ್ಲಿಸಿದ್ದರು.

ಆಯುಕ್ತರ ಸೂಚನೆ ಮೇರೆಗೆ ಬೆಳಗಾವಿ ಜಂಟಿ ನಿರ್ದೇಶಕರು ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಹಾಗೂ ಅಲ್ಲಿನ ಪ್ರಾಂಶುಪಾಲರಿಂದ ಮಾಹಿತಿ ಪಡೆದುಕೊಂಡು ಆಯುಕ್ತರಿಗೆ ವರದಿ ಮಾಡಿದ್ದಾರೆ.

ಈ ಬಗ್ಗೆ ತಕ್ಷಣ ಗ್ರಾಮಸ್ಥರು ಐಟಿಐ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಪ್ರಾಂಶುಪಾಲ ರವಿ ಕಮಡೊಳ್ಳಿ ಅವರನ್ನು ಭೇಟಿಯಾಗಿ ಚರ್ಚಿಸಿದರು.

ನಂತರ ಆಪಾದನೆಗೊಳಗಾದ ಉಪನ್ಯಾಸಕ ರವಿ ಭಜಂತ್ರಿ ಅವರನ್ನು ಕರಿಸಿ ವಿಚಾರಿಸಲಾಯಿತು. ಆ ವೇಳೆ ಉಪನ್ಯಾಸಕ ತನ್ನ ತಪ್ಪನ್ನು ಒಪ್ಪಿಕೊಂಡು ಮುಂದೆ ಈ ರೀತಿ ಮಾಡುವುದಿಲ್ಲ ಎಂದು ಹೇಳಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು